18 ರಂದು ಕರಗ ಮಹೋತ್ಸವ: ಶ್ರೀಸಪ್ತಮಾತೃಕಾ ಮಾರಿಯಮ್ಮದೇವಿ ಕರಗ ಮಹೋತ್ಸವವು ಮೇ 18 ರಂದು ರಾತ್ರಿ 11 ರಿಂದ ನಡೆಯಲಿದೆ. 9 ವರ್ಷಗಳಿಂದ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಸೇರಿದಂತೆ ಆಂದ್ರಪ್ರದೇಶ, ತಮಿಳುನಾಡು ರಾಜ್ಯದ ವಿವಿಧಡೆಗಳಲ್ಲಿ ಕರಗ ಹೊತ್ತಿರುವ ಆಂಧ್ರಪ್ರದೇಶ ಕುಪ್ಪಂ ಪೂಜಾರಿ ಮುನಿರತ್ನಂ ಬಾಲಾಜಿ ಎರಡನೇ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಕರಗ ಹೊರುತಿದ್ದಾರೆ. ವಂಶಪಾರಂಪರೆಯಾಗಿ ಕರಗ ಆಚರಣೆ ಮಾಡುತ್ತಾ ಬರುತ್ತಿರುವ ಕುಟುಂಬದ ಇವರು ಕರಗ ನೃತ್ಯದಲ್ಲಿ ಪರಿಣಿತರಾಗಿದ್ದಾರೆ.