ಜನೋತ್ಸವ ಪೂರ್ವ ಸಿದ್ದತೆ ಕುರಿತು ತಾಲ್ಲೂಕಿನ ದೊಡ್ಡಬೆಳವಂಗಲದ ಕಲ್ಯಾಣ ಮಂದಿರದಲ್ಲಿ ಶನಿವಾರ ನಡೆದ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದರು. ‘ಕರ್ನಾಟಕವನ್ನು ಉಳಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ಭಾವನೆ ಜನರಲ್ಲಿದೆ. ರಾಜ್ಯ ಮತ್ತು ದೇಶಕ್ಕೆ ಏಕೈಕ ನಾಯಕರು ನರೇಂದ್ರ ಮೋದಿ ಎಂಬ ಭಾವನೆ ಜನರದು. ರಾಜ್ಯದ ಜನರನ್ನು ಮುಟ್ಟುವ ಕಾರ್ಯವನ್ನು ನಮ್ಮ ಕಾರ್ಯಕರ್ತರು ಮಾಡಬೇಕಿದೆ’ ಎಂದರು.