<p><strong>ಹೊಸಕೋಟೆ: </strong>ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಗರಿಗೆದರಿದೆ. ಅದರಂತೆ ಸಚಿವ ಸ್ಥಾನದ ಆಕಾಂಕ್ಷೆಯಲ್ಲಿರುವ ತಾಲ್ಲೂಕಿನ ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ ನಾಗರಾಜ್ ಅವರ ಬೆಂಬಲಿಗರು ನಾಯಕನ ಪದಗ್ರಹಣ ವೀಕ್ಷಿಸಲು ತುದಿಗಾಲಲ್ಲಿ ನಿಂತಿದ್ದಾರೆ.</p>.<p>ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ಎಂ.ಟಿ.ಬಿ ನಾಗರಾಜ್ ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೆಗೌಡ ಎದುರು ಸೋತ ನಂತರ ಅವರಿಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅನುಮಾನ ಮೂಡಿತ್ತು.</p>.<p>ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಅವರ ಮಂತ್ರಿಗಿರಿ ಆಕಾಂಕ್ಷೆಯನ್ನು ಜೀವಂತವಾಗಿಟ್ಟಿದ್ದಾರೆ. ಕಳೆದ ಸಚಿವ ಸಂಪುಟದ ವಿಸ್ತರಣೆಯಲ್ಲಿಯೇ ಸ್ಥಾನದ ನಿರೀಕ್ಷೆಯಲ್ಲಿದ್ದ ಅವರು ಈಗಲಾದರೂ ಸಚಿವರಾಗುತ್ತಾರೆಯೇ ಕಾದು ನೋಡಬೇಕಾಗಿದೆ ಎನ್ನುತ್ತಾರೆ ಕಾರ್ಯಕರ್ತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಗರಿಗೆದರಿದೆ. ಅದರಂತೆ ಸಚಿವ ಸ್ಥಾನದ ಆಕಾಂಕ್ಷೆಯಲ್ಲಿರುವ ತಾಲ್ಲೂಕಿನ ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ ನಾಗರಾಜ್ ಅವರ ಬೆಂಬಲಿಗರು ನಾಯಕನ ಪದಗ್ರಹಣ ವೀಕ್ಷಿಸಲು ತುದಿಗಾಲಲ್ಲಿ ನಿಂತಿದ್ದಾರೆ.</p>.<p>ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ಎಂ.ಟಿ.ಬಿ ನಾಗರಾಜ್ ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೆಗೌಡ ಎದುರು ಸೋತ ನಂತರ ಅವರಿಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅನುಮಾನ ಮೂಡಿತ್ತು.</p>.<p>ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಅವರ ಮಂತ್ರಿಗಿರಿ ಆಕಾಂಕ್ಷೆಯನ್ನು ಜೀವಂತವಾಗಿಟ್ಟಿದ್ದಾರೆ. ಕಳೆದ ಸಚಿವ ಸಂಪುಟದ ವಿಸ್ತರಣೆಯಲ್ಲಿಯೇ ಸ್ಥಾನದ ನಿರೀಕ್ಷೆಯಲ್ಲಿದ್ದ ಅವರು ಈಗಲಾದರೂ ಸಚಿವರಾಗುತ್ತಾರೆಯೇ ಕಾದು ನೋಡಬೇಕಾಗಿದೆ ಎನ್ನುತ್ತಾರೆ ಕಾರ್ಯಕರ್ತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>