ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಸ್ಥಾನ ನಿರೀಕ್ಷೆಯಲ್ಲಿ ಎಂ.ಟಿ.ಬಿ ನಾಗರಾಜ್

Last Updated 12 ಜನವರಿ 2021, 3:04 IST
ಅಕ್ಷರ ಗಾತ್ರ

ಹೊಸಕೋಟೆ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಗರಿಗೆದರಿದೆ. ಅದರಂತೆ ಸಚಿವ ಸ್ಥಾನದ ಆಕಾಂಕ್ಷೆಯಲ್ಲಿರುವ ತಾಲ್ಲೂಕಿನ ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ ನಾಗರಾಜ್ ಅವರ ಬೆಂಬಲಿಗರು ನಾಯಕನ ಪದಗ್ರಹಣ ವೀಕ್ಷಿಸಲು ತುದಿಗಾಲಲ್ಲಿ ನಿಂತಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ಎಂ.ಟಿ.ಬಿ ನಾಗರಾಜ್ ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೆಗೌಡ ಎದುರು ಸೋತ ನಂತರ ಅವರಿಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅನುಮಾನ ಮೂಡಿತ್ತು.

ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಅವರ ಮಂತ್ರಿಗಿರಿ ಆಕಾಂಕ್ಷೆಯನ್ನು ಜೀವಂತವಾಗಿಟ್ಟಿದ್ದಾರೆ. ಕಳೆದ ಸಚಿವ ಸಂಪುಟದ ವಿಸ್ತರಣೆಯಲ್ಲಿಯೇ ಸ್ಥಾನದ ನಿರೀಕ್ಷೆಯಲ್ಲಿದ್ದ ಅವರು ಈಗಲಾದರೂ ಸಚಿವರಾಗುತ್ತಾರೆಯೇ ಕಾದು ನೋಡಬೇಕಾಗಿದೆ ಎನ್ನುತ್ತಾರೆ ಕಾರ್ಯಕರ್ತರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT