<p><strong>ದೇವನಹಳ್ಳಿ:</strong> ಭೂಸ್ವಾಧೀನ ರದ್ದುಗೊಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ ಬಳಿಕವೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಧಿಕಾರಿಗಳು ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ರೈತರಿಗೆ ನೋಟಿಸ್ ನೀಡಿರುವುದ ಗೊಂದಲಕ್ಕೆ ಕಾರಣವಾಗಿದೆ.</p>.<p>ರೈತರು ಮತ್ತು ಹೋರಾಟಗಾರರು ಸೋಮವಾರ ಬೆಂಗಳೂರಿನ ಖನಿಜ ಭವನದಲ್ಲಿರುವ ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಚೇರಿ ಮತ್ತು ಅರವಿಂದ ಭವನದಲ್ಲಿರುವ ವಿಶೇಷ ಭೂಸ್ವಾಧೀನ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮೂರೂವರೆ ವರ್ಷಗಳ ನಿರಂತರ ಹೋರಾಟದ ಫಲವಾಗಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ 13 ಹಳ್ಳಿಗಳ ರೈತರ 1,777 ಎಕರೆ ಭೂಸ್ವಾಧೀನವನ್ನು ಜುಲೈ 15ರಂದು ಸರ್ಕಾರ ಕೈಬಿಟ್ಟಿತ್ತು. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಮುಂದೆ ಅಧಿಕೃತ ಘೋಷಣೆ ಮಾಡಿದ್ದರು.</p>.<p>ಇದೀಗ ಹ್ಯಾಡಾಳ, ಗೋಕರೆಬಚ್ಚೇನಹಳ್ಳಿ ಗ್ರಾಮಗಳ 439 ಎಕರೆ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 6ರಂದು ದರ ನಿಗದಿ ಸಭೆ ಕರೆಯಲಾಗಿದೆ. ಈ ಕುರಿತು ರೈತರಿಗೆ ನೋಟಿಸ್ ನೀಡಲಾಗಿದೆ.</p>.<p>ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಕೆಐಎಡಿಬಿ ಅಧಿಕಾರಿಗಳ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದು ಮುಖ್ಯಮಂತ್ರಿ ಘೋಷಿಸಿದಂತೆ 13 ಹಳ್ಳಿಗಳ ಎಲ್ಲಾ ಭೂಮಿಗಳ ಡಿನೋಟಿಫಿಕೇಶನ್ ಮುಗಿಯುವವರೆಗೆ ಯಾವುದೇ ರೀತಿಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸದಂತೆ ಆಗ್ರಹಿಸಿದೆ.</p>.<p>ತಮ್ಮ ಒತ್ತಾಯ ಕೂಡಲೇ ಈಡೇರಿಸದಿದ್ದರೆ ಮುಂದಿನ ಎಲ್ಲ ಪರಿಣಾಮಗಳಿಗೆ ಕೆಐಎಡಿಬಿ ಕಚೇರಿಯೇ ಹೊಣೆ ಎಂದು ಎಚ್ಚರಿಕೆ ನೀಡಲಾಗಿದೆ. </p>.<p><strong>ನಕಲಿ ದಾಖಲೆ ವಿರುದ್ಧ ದೂರು</strong> </p><p>‘ಕೆಐಎಡಿಬಿ ಭೂಸ್ವಾಧೀನಕ್ಕೆ ಒಪ್ಪಿಗೆ ಇದೆ ಎಂದು ರೈತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಲಾಗಿದೆ. ಅದನ್ನು ನಂಬಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹ್ಯಾಡಾಳ ಗ್ರಾಮದ ರೈತ ಲಗುಮಯ್ಯ ಎಂಬುವರು ಈ ಸಂಬಂಧ ವಿಶೇಷ ಭೂಸ್ವಾಧೀನ ಅಧಿಕಾರಿಗೆ ದೂರು ಕೊಟ್ಟಿದ್ದಾರೆ. ಭೂಸ್ವಾಧೀನಕ್ಕೆ ನನ್ನ ಒಪ್ಪಿಗೆ ಇದೆ ಎಂದು ನಕಲಿ ದಾಖಲೆ ಸೃಷ್ಟಿಸಿ ಅಥವಾ ನಕಲಿ ಸಹಿ ಹಾಕಿ ಅಧಿಕಾರಿಗಳ ದಾರಿ ತಪ್ಪಿಸಿರುವವರು ಮತ್ತು ಅದಕ್ಕೆ ಕುಮ್ಮಕ್ಕು ನೀಡಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಭೂಸ್ವಾಧೀನ ರದ್ದುಗೊಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ ಬಳಿಕವೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಧಿಕಾರಿಗಳು ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ರೈತರಿಗೆ ನೋಟಿಸ್ ನೀಡಿರುವುದ ಗೊಂದಲಕ್ಕೆ ಕಾರಣವಾಗಿದೆ.</p>.<p>ರೈತರು ಮತ್ತು ಹೋರಾಟಗಾರರು ಸೋಮವಾರ ಬೆಂಗಳೂರಿನ ಖನಿಜ ಭವನದಲ್ಲಿರುವ ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಚೇರಿ ಮತ್ತು ಅರವಿಂದ ಭವನದಲ್ಲಿರುವ ವಿಶೇಷ ಭೂಸ್ವಾಧೀನ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮೂರೂವರೆ ವರ್ಷಗಳ ನಿರಂತರ ಹೋರಾಟದ ಫಲವಾಗಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ 13 ಹಳ್ಳಿಗಳ ರೈತರ 1,777 ಎಕರೆ ಭೂಸ್ವಾಧೀನವನ್ನು ಜುಲೈ 15ರಂದು ಸರ್ಕಾರ ಕೈಬಿಟ್ಟಿತ್ತು. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಮುಂದೆ ಅಧಿಕೃತ ಘೋಷಣೆ ಮಾಡಿದ್ದರು.</p>.<p>ಇದೀಗ ಹ್ಯಾಡಾಳ, ಗೋಕರೆಬಚ್ಚೇನಹಳ್ಳಿ ಗ್ರಾಮಗಳ 439 ಎಕರೆ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 6ರಂದು ದರ ನಿಗದಿ ಸಭೆ ಕರೆಯಲಾಗಿದೆ. ಈ ಕುರಿತು ರೈತರಿಗೆ ನೋಟಿಸ್ ನೀಡಲಾಗಿದೆ.</p>.<p>ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಕೆಐಎಡಿಬಿ ಅಧಿಕಾರಿಗಳ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದು ಮುಖ್ಯಮಂತ್ರಿ ಘೋಷಿಸಿದಂತೆ 13 ಹಳ್ಳಿಗಳ ಎಲ್ಲಾ ಭೂಮಿಗಳ ಡಿನೋಟಿಫಿಕೇಶನ್ ಮುಗಿಯುವವರೆಗೆ ಯಾವುದೇ ರೀತಿಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸದಂತೆ ಆಗ್ರಹಿಸಿದೆ.</p>.<p>ತಮ್ಮ ಒತ್ತಾಯ ಕೂಡಲೇ ಈಡೇರಿಸದಿದ್ದರೆ ಮುಂದಿನ ಎಲ್ಲ ಪರಿಣಾಮಗಳಿಗೆ ಕೆಐಎಡಿಬಿ ಕಚೇರಿಯೇ ಹೊಣೆ ಎಂದು ಎಚ್ಚರಿಕೆ ನೀಡಲಾಗಿದೆ. </p>.<p><strong>ನಕಲಿ ದಾಖಲೆ ವಿರುದ್ಧ ದೂರು</strong> </p><p>‘ಕೆಐಎಡಿಬಿ ಭೂಸ್ವಾಧೀನಕ್ಕೆ ಒಪ್ಪಿಗೆ ಇದೆ ಎಂದು ರೈತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಲಾಗಿದೆ. ಅದನ್ನು ನಂಬಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹ್ಯಾಡಾಳ ಗ್ರಾಮದ ರೈತ ಲಗುಮಯ್ಯ ಎಂಬುವರು ಈ ಸಂಬಂಧ ವಿಶೇಷ ಭೂಸ್ವಾಧೀನ ಅಧಿಕಾರಿಗೆ ದೂರು ಕೊಟ್ಟಿದ್ದಾರೆ. ಭೂಸ್ವಾಧೀನಕ್ಕೆ ನನ್ನ ಒಪ್ಪಿಗೆ ಇದೆ ಎಂದು ನಕಲಿ ದಾಖಲೆ ಸೃಷ್ಟಿಸಿ ಅಥವಾ ನಕಲಿ ಸಹಿ ಹಾಕಿ ಅಧಿಕಾರಿಗಳ ದಾರಿ ತಪ್ಪಿಸಿರುವವರು ಮತ್ತು ಅದಕ್ಕೆ ಕುಮ್ಮಕ್ಕು ನೀಡಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>