<p><strong>ದೊಡ್ಡಬಳ್ಳಾಪುರ</strong>: ‘ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರೆ ಮುಂದುವರೆಯಲಿ. ಇಲ್ಲಿ ಅಧಿಕಾರ ಬಿಟ್ಟು ಕೊಡುವ ಪ್ರಶ್ನೆ ಬಂದಿಲ್ಲ’ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.</p>.<p>ಮಂಗಳವಾರ ತಾಲ್ಲೂಕಿನ ಘಾಟಿಯಲ್ಲಿ ‘ತಾವು ಮುಖ್ಯಮಂತ್ರಿ ಆಕಾಂಕ್ಷಿಗಳ ರೇಸ್ನಲ್ಲಿ ಇದ್ದೀರಿ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿ.ಎಂ ಖುರ್ಚಿ ಸದ್ಯಕ್ಕೆ ಖಾಲಿ ಇಲ್ಲ, ಸಿಎಂ ರೇಸ್ನಲ್ಲೂ ನಾನು ಇಲ್ಲ’ ಎಂದು ಹೇಳಿದರು.</p>.<p>ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಮುಖ್ಯಮಂತ್ರಿ ಬದಲಾಣೆ ಸೇರಿದಂತೆ ಯಾವುದೇ ಬದಲಾವಣೆ ವಿಚಾರ ಚರ್ಚೆಯಲ್ಲಿ ಇಲ್ಲ. ಇದೆಲ್ಲವೂ ಹೈಕಮಾಂಡ್ಗೆ ಬಿಟ್ಟಿದ್ದು, ಹೈಕಮಾಂಡ್ ಕೈಗೊಳ್ಳುವ ತೀರ್ಮಾಕ್ಕೆ ಎಲ್ಲರು ಬದ್ದರಾಗಿದ್ದೇವೆ’ ಎಂದು ತಿಳಿಸಿದರು.</p>
<p><strong>ದೊಡ್ಡಬಳ್ಳಾಪುರ</strong>: ‘ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರೆ ಮುಂದುವರೆಯಲಿ. ಇಲ್ಲಿ ಅಧಿಕಾರ ಬಿಟ್ಟು ಕೊಡುವ ಪ್ರಶ್ನೆ ಬಂದಿಲ್ಲ’ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.</p>.<p>ಮಂಗಳವಾರ ತಾಲ್ಲೂಕಿನ ಘಾಟಿಯಲ್ಲಿ ‘ತಾವು ಮುಖ್ಯಮಂತ್ರಿ ಆಕಾಂಕ್ಷಿಗಳ ರೇಸ್ನಲ್ಲಿ ಇದ್ದೀರಿ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿ.ಎಂ ಖುರ್ಚಿ ಸದ್ಯಕ್ಕೆ ಖಾಲಿ ಇಲ್ಲ, ಸಿಎಂ ರೇಸ್ನಲ್ಲೂ ನಾನು ಇಲ್ಲ’ ಎಂದು ಹೇಳಿದರು.</p>.<p>ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಮುಖ್ಯಮಂತ್ರಿ ಬದಲಾಣೆ ಸೇರಿದಂತೆ ಯಾವುದೇ ಬದಲಾವಣೆ ವಿಚಾರ ಚರ್ಚೆಯಲ್ಲಿ ಇಲ್ಲ. ಇದೆಲ್ಲವೂ ಹೈಕಮಾಂಡ್ಗೆ ಬಿಟ್ಟಿದ್ದು, ಹೈಕಮಾಂಡ್ ಕೈಗೊಳ್ಳುವ ತೀರ್ಮಾಕ್ಕೆ ಎಲ್ಲರು ಬದ್ದರಾಗಿದ್ದೇವೆ’ ಎಂದು ತಿಳಿಸಿದರು.</p>