<p><strong>ಸೂಲಿಬೆಲೆ: </strong>‘ಹೋಬಳಿ ಕೇಂದ್ರವಾದ ಸೂಲಿಬೆಲೆ ಗ್ರಾಮಕ್ಕೆ, ಕರ್ನಾಟಕ ಪಬ್ಲಿಕ್ ಸರ್ಕಾರಿ ಶಾಲೆ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಶರತ್ ಬಚ್ಚೇಗೌಡ ಆಶ್ವಾಸನೆ ನೀಡಿದರು.</p>.<p>ಸೂಲಿಬೆಲೆ ಬಸ್ ನಿಲ್ದಾಣ ಬಳಿಯಿರುವ ಸರ್ಕಾರಿ ಮಾದರಿ ಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಟ್ರಸ್ಟ್ ವತಿಯಿಂದ ನಡೆದ ಸೋಲಾರ್ ಕುಕ್ಕರ್ ಹಾಗೂ 600 ನೋಟ್ ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸೂಲಿಬೆಲೆ ಗ್ರಾಮದಲ್ಲಿ ಒಂದನೇ ತರಗತಿಯಿಂದ ಪಿಯುಸಿವರೆಗೂ ಒಂದೇ ಶಾಲೆಯಲ್ಲಿ ವ್ಯಾಸಂಗ ಮಾಡುವ ಅವಕಾಶ ಕಲ್ಪಿಸುವ, ಕರ್ನಾಟಕ ಪಬ್ಲಿಕ್ ಶಾಲೆಯ ಬೇಡಿಕೆಯಿರುವ ಕಾರಣ ಸರ್ಕಾರಕ್ಕೆ ಶಿಫಾರಸು ಮಾಡಿ ಮಂಜೂರು ಮಾಡಿಸಿಕೊಡಲಾಗುವುದು. ಇದರಿಂದ ಈ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.</p>.<p>‘ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸ ಶಿಕ್ಷಕರಿಂದ ಸಾಧ್ಯವಿದ್ದು, ಶೈಕ್ಷಣಿಕ ಪರಿಸರ ನಿರ್ಮಿಸುವ ಕರ್ತವ್ಯ ಮುಖ್ಯ’ ಎಂದರು.</p>.<p>‘ಸ್ವಾತಂತ್ರ್ಯ ಹೋರಾಟಗಾರ ಸೂ.ರಂ.ರಾಮಯ್ಯ, ಸಂಸದ ಬಿ.ಎನ್.ಬಚ್ಚೇಗೌಡ ವಿದ್ಯಾಭ್ಯಾಸ ಮಾಡಿದ ಹಾಗೂ 110 ವರ್ಷಗಳನ್ನು ಪೂರೈಸಿದ ಶಾಲೆಯಾಗಿದ್ದು, ಶೈಕ್ಷಣಿಕವಾಗಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿ ಕಡೆ ಸಾಗಬೇಕಾದರೆ ದಾನಿಗಳ ಸಹಕಾರ ಅಗತ್ಯ’ ಎಂದರು.</p>.<p>ಯುವ ಮುಖಂಡ ಜಿ.ನಾರಾಯಣಗೌಡ ಮಾತನಾಡಿದರು.</p>.<p>ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡ, ಸಮಾಜ ಸೇವಕ ರಮೇಶ್, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ್ ರಾವ್, ಪದಾಧಿಕಾರಿಗಳಾದ ಸಂಜಯ್ ಮುಖಲ್, ಕಾಶೀನಾಥ್, ಮುಖ್ಯ ಶಿಕ್ಷಕಿ ಓಂಕಾರಮ್ಮ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ: </strong>‘ಹೋಬಳಿ ಕೇಂದ್ರವಾದ ಸೂಲಿಬೆಲೆ ಗ್ರಾಮಕ್ಕೆ, ಕರ್ನಾಟಕ ಪಬ್ಲಿಕ್ ಸರ್ಕಾರಿ ಶಾಲೆ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಶರತ್ ಬಚ್ಚೇಗೌಡ ಆಶ್ವಾಸನೆ ನೀಡಿದರು.</p>.<p>ಸೂಲಿಬೆಲೆ ಬಸ್ ನಿಲ್ದಾಣ ಬಳಿಯಿರುವ ಸರ್ಕಾರಿ ಮಾದರಿ ಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಟ್ರಸ್ಟ್ ವತಿಯಿಂದ ನಡೆದ ಸೋಲಾರ್ ಕುಕ್ಕರ್ ಹಾಗೂ 600 ನೋಟ್ ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸೂಲಿಬೆಲೆ ಗ್ರಾಮದಲ್ಲಿ ಒಂದನೇ ತರಗತಿಯಿಂದ ಪಿಯುಸಿವರೆಗೂ ಒಂದೇ ಶಾಲೆಯಲ್ಲಿ ವ್ಯಾಸಂಗ ಮಾಡುವ ಅವಕಾಶ ಕಲ್ಪಿಸುವ, ಕರ್ನಾಟಕ ಪಬ್ಲಿಕ್ ಶಾಲೆಯ ಬೇಡಿಕೆಯಿರುವ ಕಾರಣ ಸರ್ಕಾರಕ್ಕೆ ಶಿಫಾರಸು ಮಾಡಿ ಮಂಜೂರು ಮಾಡಿಸಿಕೊಡಲಾಗುವುದು. ಇದರಿಂದ ಈ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.</p>.<p>‘ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸ ಶಿಕ್ಷಕರಿಂದ ಸಾಧ್ಯವಿದ್ದು, ಶೈಕ್ಷಣಿಕ ಪರಿಸರ ನಿರ್ಮಿಸುವ ಕರ್ತವ್ಯ ಮುಖ್ಯ’ ಎಂದರು.</p>.<p>‘ಸ್ವಾತಂತ್ರ್ಯ ಹೋರಾಟಗಾರ ಸೂ.ರಂ.ರಾಮಯ್ಯ, ಸಂಸದ ಬಿ.ಎನ್.ಬಚ್ಚೇಗೌಡ ವಿದ್ಯಾಭ್ಯಾಸ ಮಾಡಿದ ಹಾಗೂ 110 ವರ್ಷಗಳನ್ನು ಪೂರೈಸಿದ ಶಾಲೆಯಾಗಿದ್ದು, ಶೈಕ್ಷಣಿಕವಾಗಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿ ಕಡೆ ಸಾಗಬೇಕಾದರೆ ದಾನಿಗಳ ಸಹಕಾರ ಅಗತ್ಯ’ ಎಂದರು.</p>.<p>ಯುವ ಮುಖಂಡ ಜಿ.ನಾರಾಯಣಗೌಡ ಮಾತನಾಡಿದರು.</p>.<p>ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡ, ಸಮಾಜ ಸೇವಕ ರಮೇಶ್, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ್ ರಾವ್, ಪದಾಧಿಕಾರಿಗಳಾದ ಸಂಜಯ್ ಮುಖಲ್, ಕಾಶೀನಾಥ್, ಮುಖ್ಯ ಶಿಕ್ಷಕಿ ಓಂಕಾರಮ್ಮ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>