<p><strong>ಆನೇಕಲ್:</strong> ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬಿ.ಇಡಿ ಪದವಿಯಲ್ಲಿ ಎರಡು ಮಕ್ಕಳ ತಾಯಿಯಾಗಿರುವ ಎಂ.ಎಲ್.ಪವಿತ್ರ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಚಿನ್ನದ ಪದಕ <br>ಪಡೆದಿದ್ದಾರೆ. </p>.<p>ತಾಲ್ಲೂಕಿನ ಸರ್ಜಾಪುರ ಸಮೀಪದ ಸುಲ್ತಾನ್ಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿಯಾಗಿರುವ ಪವಿತ್ರ ಅವರು ಭಾನುವಾರ ನಡೆದ ವಿಶ್ವವಿದ್ಯಾಲಯದ 18ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪದವಿ ಮತ್ತು ಪದಕ ಸ್ವೀಕರಿಸಿದರು.</p>.<p>‘ಓದಬೇಕು ಎಂಬ ಛಲವಿದ್ದರೆ ಸಾಧಿಸಲು ಅವಕಾಶಗಳಿವೆ. ಗೃಹಿಣಿಯಾಗಿ, ಎರಡು ಮಕ್ಕಳ ತಾಯಿಯಾಗಿರುವ ನಾನು ಸತತ ಅಧ್ಯಯನ ಮಾಡಿ ಬಿ.ಇಡ್ನಲ್ಲಿ ಪ್ರಥಮ ಸ್ಥಾನ ಪಡೆಯಲು ಸಾಧ್ಯವಾಗಿರುವುದು ಸಂತಸ ತಂದಿದೆ’ ಎಂ.ಎಲ್.ಪವಿತ್ರ ಹೇಳಿದರು.</p>.<p>‘ನನ್ನ ಪತಿ ಸಂತೋಷ್ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದಾರೆ. ಅವರ ಪ್ರೋತ್ಸಾಹ ಮತ್ತು ವಿಶ್ವವಿದ್ಯಾಲಯವು ನೀಡಿದ ಉತ್ತಮ ಮಾರ್ಗದರ್ಶನದಿಂದ ಸಾಧನೆ ಸಾಧ್ಯವಾಗಿದೆ. ಸೇವಾ ನಿರತರಾಗಿರುವವರಿಗೆ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಪದವಿಗಳನ್ನು ಪಡೆಯಲು ಉತ್ತಮ ವೇದಿಕೆಯಾಗಿದೆ’ ಎಂದರು.</p>.<p>ಟಾಪ್ಟೆನ್ನಲ್ಲಿ ತಾಲ್ಲೂಕಿನ ಇಬ್ಬರು ತಾಲ್ಲೂಕಿನ ಅತ್ತಿಬೆಲೆ ಹಿರಿಯ ಪ್ರಾಥಮಿಕ ಶಾಲೆಯ ಬಿ.ಉಷಾ ಅವರು ಬಿ.ಇಡಿ ಪದವಿಯಲ್ಲಿ 9ನೇ ರ್ಯಾಂಕ್ ಪಡೆದಿದ್ದು 10 ರ್ಯಾಂಕ್ ಪೈಕಿ ಆನೇಕಲ್ ತಾಲ್ಲೂಕಿನ ಇಬ್ಬರು ಶಿಕ್ಷಕರು ಉನ್ನತ ಸಾಧನೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬಿ.ಇಡಿ ಪದವಿಯಲ್ಲಿ ಎರಡು ಮಕ್ಕಳ ತಾಯಿಯಾಗಿರುವ ಎಂ.ಎಲ್.ಪವಿತ್ರ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಚಿನ್ನದ ಪದಕ <br>ಪಡೆದಿದ್ದಾರೆ. </p>.<p>ತಾಲ್ಲೂಕಿನ ಸರ್ಜಾಪುರ ಸಮೀಪದ ಸುಲ್ತಾನ್ಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿಯಾಗಿರುವ ಪವಿತ್ರ ಅವರು ಭಾನುವಾರ ನಡೆದ ವಿಶ್ವವಿದ್ಯಾಲಯದ 18ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪದವಿ ಮತ್ತು ಪದಕ ಸ್ವೀಕರಿಸಿದರು.</p>.<p>‘ಓದಬೇಕು ಎಂಬ ಛಲವಿದ್ದರೆ ಸಾಧಿಸಲು ಅವಕಾಶಗಳಿವೆ. ಗೃಹಿಣಿಯಾಗಿ, ಎರಡು ಮಕ್ಕಳ ತಾಯಿಯಾಗಿರುವ ನಾನು ಸತತ ಅಧ್ಯಯನ ಮಾಡಿ ಬಿ.ಇಡ್ನಲ್ಲಿ ಪ್ರಥಮ ಸ್ಥಾನ ಪಡೆಯಲು ಸಾಧ್ಯವಾಗಿರುವುದು ಸಂತಸ ತಂದಿದೆ’ ಎಂ.ಎಲ್.ಪವಿತ್ರ ಹೇಳಿದರು.</p>.<p>‘ನನ್ನ ಪತಿ ಸಂತೋಷ್ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದಾರೆ. ಅವರ ಪ್ರೋತ್ಸಾಹ ಮತ್ತು ವಿಶ್ವವಿದ್ಯಾಲಯವು ನೀಡಿದ ಉತ್ತಮ ಮಾರ್ಗದರ್ಶನದಿಂದ ಸಾಧನೆ ಸಾಧ್ಯವಾಗಿದೆ. ಸೇವಾ ನಿರತರಾಗಿರುವವರಿಗೆ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಪದವಿಗಳನ್ನು ಪಡೆಯಲು ಉತ್ತಮ ವೇದಿಕೆಯಾಗಿದೆ’ ಎಂದರು.</p>.<p>ಟಾಪ್ಟೆನ್ನಲ್ಲಿ ತಾಲ್ಲೂಕಿನ ಇಬ್ಬರು ತಾಲ್ಲೂಕಿನ ಅತ್ತಿಬೆಲೆ ಹಿರಿಯ ಪ್ರಾಥಮಿಕ ಶಾಲೆಯ ಬಿ.ಉಷಾ ಅವರು ಬಿ.ಇಡಿ ಪದವಿಯಲ್ಲಿ 9ನೇ ರ್ಯಾಂಕ್ ಪಡೆದಿದ್ದು 10 ರ್ಯಾಂಕ್ ಪೈಕಿ ಆನೇಕಲ್ ತಾಲ್ಲೂಕಿನ ಇಬ್ಬರು ಶಿಕ್ಷಕರು ಉನ್ನತ ಸಾಧನೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>