<p><strong>ದೊಡ್ಡಬಳ್ಳಾಪುರ: </strong>ನಮ್ಮ ಪಾರಂಪರಿಕ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸುಶಿಕ್ಷಿತ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಪರಂಪರೆಗೆ ಧಕ್ಕೆ ಬರದಂತೆ ಇಂದಿನ ಆಧುನಿಕತೆಯನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದು ಉಪನ್ಯಾಸಕ ಡಾ.ಬಿ.ಎಂ.ಗುರುನಾಥ್ ಹೇಳಿದರು.</p>.<p>ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ನಗರದ ಡಾ. ರಾಜ್ಕುಮಾರ್ ಕಲಾಮಂದಿರದಲ್ಲಿ (ಪುರಭವನ) ನಡೆದ ಮೂಡಲಪಾಯ ಯಕ್ಷ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಆಧುನಿಕತೆ, ಮಾಧ್ಯಮಗಳ ಪ್ರಭಾವದಿಂದ ನಮ್ಮ ನೈಜ ಕಲೆ ಸಂಸ್ಕೃತಿಗಳು ನೇಪಥ್ಯಕ್ಕೆ ಸರಿ ಯುತ್ತಿವೆ. ಇವುಗಳನ್ನು ಉಳಿಸಿ ಬೆಳೆಸಿಕೊಳ್ಳಬೇಕಿದೆ’ ಎಂದರು.</p>.<p>‘ಇದಕ್ಕಾಗಿ ಸರ್ಕಾರದ ನೆರವನ್ನೇ ಅಪೇಕ್ಷಿಸದೇ ಸಮು ದಾಯವೂ ಭಾಗವಹಿಸಬೇಕಿದೆ. ಕಲೆ ನಮ್ಮ ಸಂಸ್ಕೃತಿಯ ಭಾಗ ಎಂದು ಮನಗಂಡು ಜನಸಾಮಾನ್ಯರೇ ಇದಕ್ಕೆ ವಾರಸುದಾರರಾಗಬೇಕಿದೆ’ ಎಂದರು. ಕರ್ನಾಟಕ ಯಕ್ಷಗಾನ ಅಕಾ ಡೆಮಿಯ ಅಧ್ಯಕ್ಷ ಎಂ.ಎ.ಹೆಗಡೆ ಮಾತನಾಡಿ, ಮೂಡಲಪಾಯ ಯಕ್ಷಗಾನಕ್ಕೂ ತನ್ನದೇ ಆದ ಆಸ್ಮಿತೆ ಯಿದೆ. ಈ ಪ್ರಕಾರವನ್ನು ಪ್ರದರ್ಶಿಸುವ ಕಲಾವಿದರು ವೇಷಭೂಷಣ, ಭಾಗವತಿಕೆ, ರಂಗಸಜ್ಜಿಕೆ ಇವುಗಳ ವೈಶಿಷ್ಟ್ಯ ಹೇಗಿದೆಯೋ ಹಾಗೆ ಮುಂದುವರೆಸಿಕೊಂಡು ಹೋಗ ಬೇಕಾಗಿದೆ. ಇಲ್ಲವಾದಲ್ಲಿ ಇದು ನಾಟಕ ವೆನಿಸಿಕೊಳ್ಳುತ್ತದೆ. ಸಾಂಪ್ರದಾಯಿಕತೆ ಯನ್ನು ಉಳಿಸಿಕೊಂಡು ಇಂದಿನ ಅಗತ್ಯಗಳಿಗೆ ತಕ್ಕಂತೆ ಪ್ರದರ್ಶನ ನೀಡಬೇಕು ಎಂದರು.</p>.<p>ನಗರಸಭೆ ಉಪಾಧ್ಯಕ್ಷೆ ಜಯಲಕ್ಷ್ಮೀ ನಟರಾಜ್ ಮಾತನಾಡಿ, ‘ಕಲಾವಿದರು ಪ್ರದರ್ಶಿಸುವ ಕಲೆಗಳಿಗೆ ಸಹೃದಯರ ಕೊರತೆ ಇದ್ದರೆ ಯಶಸ್ವಿಯಾಗುವುದಿಲ್ಲ. ನಮ್ಮ ನೈಜ ಕಲೆಗಳಾದ ಯಕ್ಷಗಾನ, ನಾಟಕಗಳ ಬಗ್ಗೆ ಇಂದಿನ ಪೀಳಿಗೆಗೆ ಅಭಿರುಚಿ ಬೆಳೆಸಬೇಕಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ತಾಲ್ಲೂಕು ಕಲಾವಿದರ ಸಂಘದ ಅಧ್ಯಕ್ಷ ಎನ್.ರಾಮಾಂಜಿನಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಚಂದ್ರಶೇಖರ್, ಕರ್ನಾಟಕ ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ಎಸ್.ಎಚ್.ಶಿವರುದ್ರಪ್ಪ , ಸದಸ್ಯ ಸಂಚಾಲಕ ಕೆ.ಸಿ.ನಾರಾಯಣ್ ಇದ್ದರು. ಕಾರ್ಯಕ್ರಮದ ಅಂಗವಾಗಿ ಹಳಿಯಾಳದ ಸಿದ್ದಪ್ಪ ಬಿರಾದಾರ ಮತ್ತು ತಂಡದಿಂದ ಯಕ್ಷಗಾನ ಗೊಂಬೆಯಾಟ ಏಕಲವ್ಯ ಪ್ರಸಂಗ ಹಾಗೂ ಅರಳುಗುಪ್ಪೆಯ ತಿಮ್ಮಯ್ಯ ಮತ್ತು ಸಂಗಡಿಗರಿಂದ ರತಿ ಕಲ್ಯಾಣ ಮೂಡಲಪಾಯ ಯಕ್ಷಗಾನ ಪ್ರಸಂಗ ಪ್ರದರ್ಶಿತವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ನಮ್ಮ ಪಾರಂಪರಿಕ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸುಶಿಕ್ಷಿತ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಪರಂಪರೆಗೆ ಧಕ್ಕೆ ಬರದಂತೆ ಇಂದಿನ ಆಧುನಿಕತೆಯನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದು ಉಪನ್ಯಾಸಕ ಡಾ.ಬಿ.ಎಂ.ಗುರುನಾಥ್ ಹೇಳಿದರು.</p>.<p>ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ನಗರದ ಡಾ. ರಾಜ್ಕುಮಾರ್ ಕಲಾಮಂದಿರದಲ್ಲಿ (ಪುರಭವನ) ನಡೆದ ಮೂಡಲಪಾಯ ಯಕ್ಷ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಆಧುನಿಕತೆ, ಮಾಧ್ಯಮಗಳ ಪ್ರಭಾವದಿಂದ ನಮ್ಮ ನೈಜ ಕಲೆ ಸಂಸ್ಕೃತಿಗಳು ನೇಪಥ್ಯಕ್ಕೆ ಸರಿ ಯುತ್ತಿವೆ. ಇವುಗಳನ್ನು ಉಳಿಸಿ ಬೆಳೆಸಿಕೊಳ್ಳಬೇಕಿದೆ’ ಎಂದರು.</p>.<p>‘ಇದಕ್ಕಾಗಿ ಸರ್ಕಾರದ ನೆರವನ್ನೇ ಅಪೇಕ್ಷಿಸದೇ ಸಮು ದಾಯವೂ ಭಾಗವಹಿಸಬೇಕಿದೆ. ಕಲೆ ನಮ್ಮ ಸಂಸ್ಕೃತಿಯ ಭಾಗ ಎಂದು ಮನಗಂಡು ಜನಸಾಮಾನ್ಯರೇ ಇದಕ್ಕೆ ವಾರಸುದಾರರಾಗಬೇಕಿದೆ’ ಎಂದರು. ಕರ್ನಾಟಕ ಯಕ್ಷಗಾನ ಅಕಾ ಡೆಮಿಯ ಅಧ್ಯಕ್ಷ ಎಂ.ಎ.ಹೆಗಡೆ ಮಾತನಾಡಿ, ಮೂಡಲಪಾಯ ಯಕ್ಷಗಾನಕ್ಕೂ ತನ್ನದೇ ಆದ ಆಸ್ಮಿತೆ ಯಿದೆ. ಈ ಪ್ರಕಾರವನ್ನು ಪ್ರದರ್ಶಿಸುವ ಕಲಾವಿದರು ವೇಷಭೂಷಣ, ಭಾಗವತಿಕೆ, ರಂಗಸಜ್ಜಿಕೆ ಇವುಗಳ ವೈಶಿಷ್ಟ್ಯ ಹೇಗಿದೆಯೋ ಹಾಗೆ ಮುಂದುವರೆಸಿಕೊಂಡು ಹೋಗ ಬೇಕಾಗಿದೆ. ಇಲ್ಲವಾದಲ್ಲಿ ಇದು ನಾಟಕ ವೆನಿಸಿಕೊಳ್ಳುತ್ತದೆ. ಸಾಂಪ್ರದಾಯಿಕತೆ ಯನ್ನು ಉಳಿಸಿಕೊಂಡು ಇಂದಿನ ಅಗತ್ಯಗಳಿಗೆ ತಕ್ಕಂತೆ ಪ್ರದರ್ಶನ ನೀಡಬೇಕು ಎಂದರು.</p>.<p>ನಗರಸಭೆ ಉಪಾಧ್ಯಕ್ಷೆ ಜಯಲಕ್ಷ್ಮೀ ನಟರಾಜ್ ಮಾತನಾಡಿ, ‘ಕಲಾವಿದರು ಪ್ರದರ್ಶಿಸುವ ಕಲೆಗಳಿಗೆ ಸಹೃದಯರ ಕೊರತೆ ಇದ್ದರೆ ಯಶಸ್ವಿಯಾಗುವುದಿಲ್ಲ. ನಮ್ಮ ನೈಜ ಕಲೆಗಳಾದ ಯಕ್ಷಗಾನ, ನಾಟಕಗಳ ಬಗ್ಗೆ ಇಂದಿನ ಪೀಳಿಗೆಗೆ ಅಭಿರುಚಿ ಬೆಳೆಸಬೇಕಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ತಾಲ್ಲೂಕು ಕಲಾವಿದರ ಸಂಘದ ಅಧ್ಯಕ್ಷ ಎನ್.ರಾಮಾಂಜಿನಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಚಂದ್ರಶೇಖರ್, ಕರ್ನಾಟಕ ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ಎಸ್.ಎಚ್.ಶಿವರುದ್ರಪ್ಪ , ಸದಸ್ಯ ಸಂಚಾಲಕ ಕೆ.ಸಿ.ನಾರಾಯಣ್ ಇದ್ದರು. ಕಾರ್ಯಕ್ರಮದ ಅಂಗವಾಗಿ ಹಳಿಯಾಳದ ಸಿದ್ದಪ್ಪ ಬಿರಾದಾರ ಮತ್ತು ತಂಡದಿಂದ ಯಕ್ಷಗಾನ ಗೊಂಬೆಯಾಟ ಏಕಲವ್ಯ ಪ್ರಸಂಗ ಹಾಗೂ ಅರಳುಗುಪ್ಪೆಯ ತಿಮ್ಮಯ್ಯ ಮತ್ತು ಸಂಗಡಿಗರಿಂದ ರತಿ ಕಲ್ಯಾಣ ಮೂಡಲಪಾಯ ಯಕ್ಷಗಾನ ಪ್ರಸಂಗ ಪ್ರದರ್ಶಿತವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>