<p><strong>ಆನೇಕಲ್: </strong>ತಾಲ್ಲೂಕಿನ ದೊಮ್ಮಸಂದ್ರದಲ್ಲಿ ಕಾಶಿ ವಿಶ್ವನಾಥೇಶ್ವರ ಸ್ವಾಮಿ ಹಾಗೂ ಮಹಾ ಗಣಪತಿ ಸುಬ್ರಮಣ್ಯ ರಥೋತ್ಸವ ಸೋಮವಾರ ಸಡಗರದಿಂದ ನೆರವೇರಿತು. ಸುತ್ತಮುತ್ತಲ ನೂರಾರು ಗ್ರಾಮಸ್ಥರು ರಥೋತ್ಸವಕ್ಕೆ ಸಾಕ್ಷಿಯಾದರು.</p>.<p>ಅಲಂಕೃತ ರಥದಲ್ಲಿ ಗಿರಿಜಾ ಸಮೇತ ಕಾಶಿ ವಿಶ್ವನಾಥೇಶ್ವರ ಸ್ವಾಮಿ ಉತ್ಸವ ಮೂರ್ತಿಯನ್ನು ರಥದಲ್ಲಿ ಕುಳ್ಳರಿಸಲಾಯಿತು. ದೇವಾಲಯದ ಅರ್ಚಕರು ಪೂಜೆ ನೆರವೇರಿಸಿದ ನಂತರ ರಥಕ್ಕೆ ಚಾಲನೆ ನೀಡಲಾಯಿತು.</p>.<p>ಕಾಶಿ ವಿಶ್ವನಾಥೇಶ್ವರ ಸ್ವಾಮಿ ರಥ ಹಾಗೂ ಗಣೇಶ, ಸುಬ್ರಮಣ್ಯ ಸ್ವಾಮಿ ರಥಗಳು ಗ್ರಾಮದ ಮುಖ್ಯ ಬೀದಿಗಳಲ್ಲಿ ಸಾಗಿದವು. ಎರಡು ರಥಗಳು ಸಾಗುತ್ತಿದ್ದರೆ ಸಹಸ್ರಾರು ಮಂದಿ ಭಕ್ತರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ವೈಭವದ ರಥೋತ್ಸವವನ್ನು ಕಣ್ತುಂಬಿಕೊಂಡರು.</p>.<p>ಭಕ್ತರು ದವನ ಚುಚ್ಚಿದ ಬಾಳೆಹಣ್ಣನ್ನು ರಥಕ್ಕೆ ಎಸೆಯುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು.</p>.<p>ಗ್ರಾಮದ ವಿವಿಧೆಡೆ ಅರವಂಟಿಕೆ ಸ್ಥಾಪಿಸಿ ರಥೋತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ನೀರು ಮಜ್ಜಿಗೆ, ಪಾನಕ, ಕೋಸಂಬರಿ ವಿತರಿಸಲಾಯಿತು.</p>.<p>ರಥೋತ್ಸವದಲ್ಲಿ ಮಹಿಳಾ ಡೊಳ್ಳುಕುಣಿತ, ವೀರಗಾಸೆ, ಗಾರುಡಿ ಗೊಂಬೆ, ತಮಟೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಪಾಲ್ಗೊಂಡು ಉತ್ಸವಕ್ಕೆ ಮೆರುಗು ನೀಡಿದವು.</p>.<p>ರಥೋಥ್ಸವದ ಅಂಗವಾಗಿ ಕಾಶಿ ಯಾತ್ರೆ, ಗಿರಿಜಾ ಕಲ್ಯಾಣ, ನಂದಿ ವಾಹನೋತ್ಸವ, ಧೂಳೋತ್ಸವ, ಉಯ್ಯಾಲೋತ್ಸವಗಳು ನಡೆದವು. ಮುತ್ಯಾಲಮ್ಮ ದೇವಿ ಕರಗ ಮಹೋತ್ಸವ, ಗ್ರಾಮದೇವತೆಗಳ ಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ದೊಮ್ಮಸಂದ್ರದಲ್ಲಿ ಕಾಶಿ ವಿಶ್ವನಾಥೇಶ್ವರ ಸ್ವಾಮಿ ಹಾಗೂ ಮಹಾ ಗಣಪತಿ ಸುಬ್ರಮಣ್ಯ ರಥೋತ್ಸವ ಸೋಮವಾರ ಸಡಗರದಿಂದ ನೆರವೇರಿತು. ಸುತ್ತಮುತ್ತಲ ನೂರಾರು ಗ್ರಾಮಸ್ಥರು ರಥೋತ್ಸವಕ್ಕೆ ಸಾಕ್ಷಿಯಾದರು.</p>.<p>ಅಲಂಕೃತ ರಥದಲ್ಲಿ ಗಿರಿಜಾ ಸಮೇತ ಕಾಶಿ ವಿಶ್ವನಾಥೇಶ್ವರ ಸ್ವಾಮಿ ಉತ್ಸವ ಮೂರ್ತಿಯನ್ನು ರಥದಲ್ಲಿ ಕುಳ್ಳರಿಸಲಾಯಿತು. ದೇವಾಲಯದ ಅರ್ಚಕರು ಪೂಜೆ ನೆರವೇರಿಸಿದ ನಂತರ ರಥಕ್ಕೆ ಚಾಲನೆ ನೀಡಲಾಯಿತು.</p>.<p>ಕಾಶಿ ವಿಶ್ವನಾಥೇಶ್ವರ ಸ್ವಾಮಿ ರಥ ಹಾಗೂ ಗಣೇಶ, ಸುಬ್ರಮಣ್ಯ ಸ್ವಾಮಿ ರಥಗಳು ಗ್ರಾಮದ ಮುಖ್ಯ ಬೀದಿಗಳಲ್ಲಿ ಸಾಗಿದವು. ಎರಡು ರಥಗಳು ಸಾಗುತ್ತಿದ್ದರೆ ಸಹಸ್ರಾರು ಮಂದಿ ಭಕ್ತರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ವೈಭವದ ರಥೋತ್ಸವವನ್ನು ಕಣ್ತುಂಬಿಕೊಂಡರು.</p>.<p>ಭಕ್ತರು ದವನ ಚುಚ್ಚಿದ ಬಾಳೆಹಣ್ಣನ್ನು ರಥಕ್ಕೆ ಎಸೆಯುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು.</p>.<p>ಗ್ರಾಮದ ವಿವಿಧೆಡೆ ಅರವಂಟಿಕೆ ಸ್ಥಾಪಿಸಿ ರಥೋತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ನೀರು ಮಜ್ಜಿಗೆ, ಪಾನಕ, ಕೋಸಂಬರಿ ವಿತರಿಸಲಾಯಿತು.</p>.<p>ರಥೋತ್ಸವದಲ್ಲಿ ಮಹಿಳಾ ಡೊಳ್ಳುಕುಣಿತ, ವೀರಗಾಸೆ, ಗಾರುಡಿ ಗೊಂಬೆ, ತಮಟೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಪಾಲ್ಗೊಂಡು ಉತ್ಸವಕ್ಕೆ ಮೆರುಗು ನೀಡಿದವು.</p>.<p>ರಥೋಥ್ಸವದ ಅಂಗವಾಗಿ ಕಾಶಿ ಯಾತ್ರೆ, ಗಿರಿಜಾ ಕಲ್ಯಾಣ, ನಂದಿ ವಾಹನೋತ್ಸವ, ಧೂಳೋತ್ಸವ, ಉಯ್ಯಾಲೋತ್ಸವಗಳು ನಡೆದವು. ಮುತ್ಯಾಲಮ್ಮ ದೇವಿ ಕರಗ ಮಹೋತ್ಸವ, ಗ್ರಾಮದೇವತೆಗಳ ಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>