ಜೂನ್ 27ರ ಒಳಗೆ ಪಡಿತರ ಪಡೆಯಲು ಸೂಚನೆ
ಆಹಾರ ಇಲಾಖೆಯ ಸರ್ವರ್ ನಿರ್ವಹಣೆ ಜೂನ್ 28 ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಈ ಸಮಯದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಜೂನ್ 27ರ ಒಳಗಾಗಿ ಈ ತಿಂಗಳ ಆಹಾರ ಧಾನ್ಯಗಳನ್ನು ಪಡಿತರದಾರರು ಪಡೆದುಕೊಳ್ಳುವಂತೆ ದೊಡ್ಡಬಳ್ಳಾಪುರ ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದ್ದಾರೆ.