<p><strong>ದೇವನಹಳ್ಳಿ: </strong>‘ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಿಂದ ಅನುದಾನ ತರುವ ಶಕ್ತಿ ಇದೆ, ಅಧಿಕಾರಿಗಳು ಏನೇನು ಆಗಬೇಕು ಎಂಬುದರ ಬಗ್ಗೆ ಮಾಹಿತಿ ನೀಡಬೇಕು’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಪೂರ್ವಭಾವಿ ಸಭೆಯುಲ್ಲಿ ಮಾತನಾಡಿದರು.</p>.<p>‘ಅಧಿಕಾರಿಗಳು ಅಭಿವೃದ್ಧಿಯ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು, ಈ ಹಿಂದಿನ ಸರ್ಕಾರದಲ್ಲಿ ಅನುದಾನ ಬಿಡುಗಡೆಯಾಗಿ ಆಗಿರುವ ಕಾಮಗಾರಿಗಳು ಮತ್ತು ವಿವಿಧ ಇಲಾಖೆಗಳಿಂದ ಅರ್ಹರಿಗೆ ಬಂದಿರುವ ಪ್ರೋತ್ಸಾಹ ಯೋಜನೆಗಳನ್ನು ಪಟ್ಟಿ ಮಾಡಿ ನೀಡಬೇಕು. ₹ 5 ಲಕ್ಷಕ್ಕಿಂತ ಹೆಚ್ಚು ಅನುದಾನದ ಕಾಮಗಾರಿಗಳನ್ನು ಮಾತ್ರ ಪರಿಗಣಿಸಿ’ ಎಂದರು.</p>.<p>ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಕೃಷ್ಣಪ್ಪ ಮತನಾಡಿ, ತಾಲ್ಲೂಕಿನಲ್ಲಿ ಪ್ರಸ್ತುತ 6 ನೂತನ ರಸ್ತೆ ನಿರ್ಮಾಣ ಡಾಂಬರೀಕರಣಕ್ಕೆ ₹ 35 ಕೋಟಿ ಅನುದಾನ ಬಂದಿದೆ. ಮೇಲಿನ ತೋಟದಿಂದ ನ್ಯಾಯಾಂಗ ಬಡಾವಣೆಯವರೆಗೆ ರಸ್ತೆ ಅಭಿವೃದ್ಧಿಗೆ ₹ 5 ಕೋಟಿ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದರು.</p>.<p>ಶಿಶು ಮತ್ತು ಮಹಿಳಾ ಅಭಿವೃದ್ಧಿ ಯೋಜನಾಧಿಕಾರಿ ಅಶ್ವಥಮ್ಮ ಮಾತನಾಡಿ, ಎರಡು ವರ್ಷಗಳಿಂದ ಎರಡು ಸಾವಿರ ಮಹಿಳೆಯರಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಿಲ್ಲ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಹನುಮಂತೇಗೌಡ ಮಾತನಾಡಿ, ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಸಿದ್ಧತೆಯಾಗಿದೆ, ಪುರಸಭೆ ಮುಂಭಾಗದಲ್ಲಿ ವಾಣಿಜ್ಯ ಸಂಕೀರ್ಣಕ್ಕೆ ಭೂಮಿ ಪೂಜೆ ನಡೆಸಬೇಕು ಎಂದರು.</p>.<p>ತಾಲ್ಲೂಕಿನಲ್ಲಿ ವಿವಿಧೆಡೆ 10 ಶುದ್ಧ ಕುಡಿಯುವ ನೀರಿನ ಘಟಕ ಮತ್ತು ರಂಗನಾಥಪುರ ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್, ಬೆಸ್ಕಾಂ ಶಾಖಾ ಕಚೇರಿ ಉದ್ಘಾಟನೆಯಾಗಬೇಕು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ಎಂ. ರಾಜಣ್ಣ ಮಾತನಾಡಿ, ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ 94 ಸಿಸಿ ಅಡಿಯಲ್ಲಿ 1200 ಅರ್ಜಿಗಳು ನಿವೇಶನಕ್ಕಾಗಿ ಸಲ್ಲಿಸಿದ್ದಾರೆ. 800 ಅರ್ಹರನ್ನು ಆಯ್ಕೆ ಮಾಡಲಾಗಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುರುಡಯ್ಯ ಮಾತನಾಡಿ, ತಾಲ್ಲೂಕು ಪಂಚಾಯಿತಿ ವತಿಯಿಂದ 179 ಅರ್ಹರನ್ನು ನಿವೇಶನ ನೀಡಲು ಗುರುತಿಸಲಾಗಿದೆ ಎಂದರು.</p>.<p>ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪೊಲೀಸ್ ಠಾಣೆಗೆ ಸ್ವಂತ ಕಟ್ಟಡವಿಲ್ಲ, ಜಿಲ್ಲಾ ಮಟ್ಟದ ಹೈಟೆಕ್ ಬಸ್ ನಿಲ್ದಾಣವಾಗಬೇಕು, ತಾಲ್ಲೂಕು ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಗೆ ಎಲ್ಲ ಇಲಾಖೆ ಅಧಿಕಾರಿಗಳಿಂದ ಆಗಬೇಕಾಗಿರುವ ಕಾಮಗಾರಿ ಕುರಿತು ಮಾಸ್ಟರ್ ಪ್ಲಾನ್ ರೂಪಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>‘ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಿಂದ ಅನುದಾನ ತರುವ ಶಕ್ತಿ ಇದೆ, ಅಧಿಕಾರಿಗಳು ಏನೇನು ಆಗಬೇಕು ಎಂಬುದರ ಬಗ್ಗೆ ಮಾಹಿತಿ ನೀಡಬೇಕು’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಪೂರ್ವಭಾವಿ ಸಭೆಯುಲ್ಲಿ ಮಾತನಾಡಿದರು.</p>.<p>‘ಅಧಿಕಾರಿಗಳು ಅಭಿವೃದ್ಧಿಯ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು, ಈ ಹಿಂದಿನ ಸರ್ಕಾರದಲ್ಲಿ ಅನುದಾನ ಬಿಡುಗಡೆಯಾಗಿ ಆಗಿರುವ ಕಾಮಗಾರಿಗಳು ಮತ್ತು ವಿವಿಧ ಇಲಾಖೆಗಳಿಂದ ಅರ್ಹರಿಗೆ ಬಂದಿರುವ ಪ್ರೋತ್ಸಾಹ ಯೋಜನೆಗಳನ್ನು ಪಟ್ಟಿ ಮಾಡಿ ನೀಡಬೇಕು. ₹ 5 ಲಕ್ಷಕ್ಕಿಂತ ಹೆಚ್ಚು ಅನುದಾನದ ಕಾಮಗಾರಿಗಳನ್ನು ಮಾತ್ರ ಪರಿಗಣಿಸಿ’ ಎಂದರು.</p>.<p>ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಕೃಷ್ಣಪ್ಪ ಮತನಾಡಿ, ತಾಲ್ಲೂಕಿನಲ್ಲಿ ಪ್ರಸ್ತುತ 6 ನೂತನ ರಸ್ತೆ ನಿರ್ಮಾಣ ಡಾಂಬರೀಕರಣಕ್ಕೆ ₹ 35 ಕೋಟಿ ಅನುದಾನ ಬಂದಿದೆ. ಮೇಲಿನ ತೋಟದಿಂದ ನ್ಯಾಯಾಂಗ ಬಡಾವಣೆಯವರೆಗೆ ರಸ್ತೆ ಅಭಿವೃದ್ಧಿಗೆ ₹ 5 ಕೋಟಿ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದರು.</p>.<p>ಶಿಶು ಮತ್ತು ಮಹಿಳಾ ಅಭಿವೃದ್ಧಿ ಯೋಜನಾಧಿಕಾರಿ ಅಶ್ವಥಮ್ಮ ಮಾತನಾಡಿ, ಎರಡು ವರ್ಷಗಳಿಂದ ಎರಡು ಸಾವಿರ ಮಹಿಳೆಯರಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಿಲ್ಲ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಹನುಮಂತೇಗೌಡ ಮಾತನಾಡಿ, ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಸಿದ್ಧತೆಯಾಗಿದೆ, ಪುರಸಭೆ ಮುಂಭಾಗದಲ್ಲಿ ವಾಣಿಜ್ಯ ಸಂಕೀರ್ಣಕ್ಕೆ ಭೂಮಿ ಪೂಜೆ ನಡೆಸಬೇಕು ಎಂದರು.</p>.<p>ತಾಲ್ಲೂಕಿನಲ್ಲಿ ವಿವಿಧೆಡೆ 10 ಶುದ್ಧ ಕುಡಿಯುವ ನೀರಿನ ಘಟಕ ಮತ್ತು ರಂಗನಾಥಪುರ ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್, ಬೆಸ್ಕಾಂ ಶಾಖಾ ಕಚೇರಿ ಉದ್ಘಾಟನೆಯಾಗಬೇಕು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ಎಂ. ರಾಜಣ್ಣ ಮಾತನಾಡಿ, ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ 94 ಸಿಸಿ ಅಡಿಯಲ್ಲಿ 1200 ಅರ್ಜಿಗಳು ನಿವೇಶನಕ್ಕಾಗಿ ಸಲ್ಲಿಸಿದ್ದಾರೆ. 800 ಅರ್ಹರನ್ನು ಆಯ್ಕೆ ಮಾಡಲಾಗಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುರುಡಯ್ಯ ಮಾತನಾಡಿ, ತಾಲ್ಲೂಕು ಪಂಚಾಯಿತಿ ವತಿಯಿಂದ 179 ಅರ್ಹರನ್ನು ನಿವೇಶನ ನೀಡಲು ಗುರುತಿಸಲಾಗಿದೆ ಎಂದರು.</p>.<p>ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪೊಲೀಸ್ ಠಾಣೆಗೆ ಸ್ವಂತ ಕಟ್ಟಡವಿಲ್ಲ, ಜಿಲ್ಲಾ ಮಟ್ಟದ ಹೈಟೆಕ್ ಬಸ್ ನಿಲ್ದಾಣವಾಗಬೇಕು, ತಾಲ್ಲೂಕು ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಗೆ ಎಲ್ಲ ಇಲಾಖೆ ಅಧಿಕಾರಿಗಳಿಂದ ಆಗಬೇಕಾಗಿರುವ ಕಾಮಗಾರಿ ಕುರಿತು ಮಾಸ್ಟರ್ ಪ್ಲಾನ್ ರೂಪಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>