<p>ದೇವನಹಳ್ಳಿ: ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆ 18ನೇ ವರ್ಷಾಚರಣೆ ಅಂಗವಾಗಿ ಭಾರತೀಯ ಅಂಚೆ ಇಲಾಖೆ ವಿಶೇಷ ಅಂಚೆ ಲಕೋಟೆ ಹಾಗೂ ಸ್ಮರಣಾರ್ಥ ಅಂಚೆ ಕಾರ್ಡ್ಗಳನ್ನು ಮಂಗಳವಾರ ಬಿಡುಗಡೆ ಮಾಡಿದೆ.</p>.<p>2008ರಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಆರಂಭವಾದ ದೇಶದ ಮೊದಲ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣವಾದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ನಗರವನ್ನು ಜಾಗತಿಕ ಮಟ್ಟದಲ್ಲಿ ಸಂಪರ್ಕಿಸುವ ಪ್ರಮುಖ ಕೇಂದ್ರವಾಗಿ ಬೆಳೆದಿರುವ ಹಿನ್ನೆಲೆಯಲ್ಲಿ ಈ ವಿಶೇಷ ಗೌರವ ನೀಡಲಾಗಿದೆ.</p>.<p>ವಿಮಾನ ನಿಲ್ದಾಣದ ಅಂಚೆ ಕಚೇರಿಯಲ್ಲಿ ಬಳಸಲಾಗುವ ಶಾಶ್ವತ ಚಿತ್ರಾತ್ಮಕ ರದ್ದತಿ ಮೊಹರಿನಲ್ಲಿ ನಾಡಪ್ರಭು ಕೆಂಪೇಗೌಡರ ಚಿತ್ರಣದೊಂದಿಗೆ ವಿಮಾನ ನಿಲ್ದಾಣದ ವಿನ್ಯಾಸ ಅಳವಡಿಸಲಾಗಿದೆ. ಇದು ನಗರದ ಐತಿಹಾಸಿಕ ಪರಂಪರೆ ಮತ್ತು ಆಧುನಿಕ ಜಾಗತಿಕ ಗುರುತಿನ ಸಂಕೇತವಾಗಿ ಮೂಡಿ ಬಂದಿದೆ.</p>.<p>ವಿಶೇಷ ಅಂಚೆ ಲಕೋಟೆ ಹಾಗೂ ಸ್ಮರಣಾರ್ಥ ಅಂಚೆ ಕಾರ್ಡ್ಗಳು ಪ್ರಯಾಣಿಕರು ಮತ್ತು ಅಂಚೆ ಚೀಟಿ ಸಂಗ್ರಹಾಸಕ್ತರಿಗೆ ವಿಶೇಷ ಸ್ಮರಣಿಕೆಯಾಗಲಿದೆ. ವಿಮಾನ ನಿಲ್ದಾಣದ ‘ಫಿಲ್ಸ್ ಲೈಕ್ ಬಿಎಲ್ಆರ್’ ಅಭಿಯಾನದ ಭಾಗವಾಗಿದೆ.</p>.<p>ಈ ಕುರಿತು ಮಾತನಾಡಿದ ವಿಮಾನ ನಿಲ್ದಾಣದ ಸಿಇಒ ಹರಿ ಮಾರರ್,‘18 ವರ್ಷಗಳ ಪಯಣವು ಬೆಂಗಳೂರಿನ ಬೆಳವಣಿಗೆಯೊಂದಿಗೆ ಬೆಸೆದುಕೊಂಡಿದೆ. ಲಕ್ಷಾಂತರ ಪ್ರಯಾಣಿಕರಿಗೆ ಈ ವಿಮಾನ ನಿಲ್ದಾಣವೇ ನಗರದ ಮೊದಲ ಅನುಭವವಾಗಿದೆ. ಭಾರತೀಯ ಅಂಚೆ ಇಲಾಖೆ ಈ ಗೌರವವು ವಿಮಾನ ನಿಲ್ದಾಣದ ಬೆಳವಣಿಗೆಯನ್ನು ಅರ್ಥಪೂರ್ಣವಾಗಿ ಸ್ಮರಿಸುತ್ತದೆ’ ಎಂದು ಹೇಳಿದರು.</p>.<p>ಭಾರತೀಯ ಅಂಚೆ ಇಲಾಖೆ ಬೆಂಗಳೂರು ಕೇಂದ್ರ ವಲಯದ ಅಂಚೆ ಸೇವೆಗಳ ನಿರ್ದೇಶಕಿ ವಿ.ತಾರಾ ಮಾತನಾಡಿ, ‘ನಗರದ ಪರಂಪರೆ ಮತ್ತು ಜಾಗತಿಕ ಗುರುತಿನ ಪ್ರತೀಕವಾಗಿರುವ ವಿಮಾನ ನಿಲ್ದಾಣವನ್ನು ಗೌರವಿಸುವ ಉದ್ದೇಶದಿಂದ ಈ ಶಾಶ್ವತ ಚಿತ್ರಾತ್ಮಕ ರದ್ದತಿ ಮೊಹರನ್ನು ಬಿಡುಗಡೆ ಮಾಡಲಾಗಿದೆ. ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಾರ್ಡ್ಗಳು ಸಂಗ್ರಹಾಸಕ್ತರಿಗೆ ಅಮೂಲ್ಯ ನೆನಪಾಗಲಿದೆ’ಎಂದು ತಿಳಿಸಿದರು.</p>.<p>ಈ ಶಾಶ್ವತ ಚಿತ್ರಾತ್ಮಕ ಅಂಚೆ ಚೀಟಿ ರದ್ದತಿ ಮೊಹರು ವಿಮಾನ ನಿಲ್ದಾಣದ ಅಂಚೆ ಕಚೇರಿಯಲ್ಲಿ ಲಭ್ಯವಿರಲಿದೆ. ವಿಶೇಷ ಅಂಚೆ ಲಕೋಟೆ ಹಾಗೂ ಅಂಚೆ ಕಾರ್ಡ್ಗಳು ಬೆಂಗಳೂರು ಜಿಪಿಒ ಫಿಲಾಟೆಲಿಕ್ ಬ್ಯೂರೋ ಸೇರಿದಂತೆ ರಾಜ್ಯದ ಪ್ರಮುಖ ಫಿಲಾಟೆಲಿಕ್ ಕೇಂದ್ರಗಳಲ್ಲಿ ಸಿಗಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-15-1617483651</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆ 18ನೇ ವರ್ಷಾಚರಣೆ ಅಂಗವಾಗಿ ಭಾರತೀಯ ಅಂಚೆ ಇಲಾಖೆ ವಿಶೇಷ ಅಂಚೆ ಲಕೋಟೆ ಹಾಗೂ ಸ್ಮರಣಾರ್ಥ ಅಂಚೆ ಕಾರ್ಡ್ಗಳನ್ನು ಮಂಗಳವಾರ ಬಿಡುಗಡೆ ಮಾಡಿದೆ.</p>.<p>2008ರಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಆರಂಭವಾದ ದೇಶದ ಮೊದಲ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣವಾದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ನಗರವನ್ನು ಜಾಗತಿಕ ಮಟ್ಟದಲ್ಲಿ ಸಂಪರ್ಕಿಸುವ ಪ್ರಮುಖ ಕೇಂದ್ರವಾಗಿ ಬೆಳೆದಿರುವ ಹಿನ್ನೆಲೆಯಲ್ಲಿ ಈ ವಿಶೇಷ ಗೌರವ ನೀಡಲಾಗಿದೆ.</p>.<p>ವಿಮಾನ ನಿಲ್ದಾಣದ ಅಂಚೆ ಕಚೇರಿಯಲ್ಲಿ ಬಳಸಲಾಗುವ ಶಾಶ್ವತ ಚಿತ್ರಾತ್ಮಕ ರದ್ದತಿ ಮೊಹರಿನಲ್ಲಿ ನಾಡಪ್ರಭು ಕೆಂಪೇಗೌಡರ ಚಿತ್ರಣದೊಂದಿಗೆ ವಿಮಾನ ನಿಲ್ದಾಣದ ವಿನ್ಯಾಸ ಅಳವಡಿಸಲಾಗಿದೆ. ಇದು ನಗರದ ಐತಿಹಾಸಿಕ ಪರಂಪರೆ ಮತ್ತು ಆಧುನಿಕ ಜಾಗತಿಕ ಗುರುತಿನ ಸಂಕೇತವಾಗಿ ಮೂಡಿ ಬಂದಿದೆ.</p>.<p>ವಿಶೇಷ ಅಂಚೆ ಲಕೋಟೆ ಹಾಗೂ ಸ್ಮರಣಾರ್ಥ ಅಂಚೆ ಕಾರ್ಡ್ಗಳು ಪ್ರಯಾಣಿಕರು ಮತ್ತು ಅಂಚೆ ಚೀಟಿ ಸಂಗ್ರಹಾಸಕ್ತರಿಗೆ ವಿಶೇಷ ಸ್ಮರಣಿಕೆಯಾಗಲಿದೆ. ವಿಮಾನ ನಿಲ್ದಾಣದ ‘ಫಿಲ್ಸ್ ಲೈಕ್ ಬಿಎಲ್ಆರ್’ ಅಭಿಯಾನದ ಭಾಗವಾಗಿದೆ.</p>.<p>ಈ ಕುರಿತು ಮಾತನಾಡಿದ ವಿಮಾನ ನಿಲ್ದಾಣದ ಸಿಇಒ ಹರಿ ಮಾರರ್,‘18 ವರ್ಷಗಳ ಪಯಣವು ಬೆಂಗಳೂರಿನ ಬೆಳವಣಿಗೆಯೊಂದಿಗೆ ಬೆಸೆದುಕೊಂಡಿದೆ. ಲಕ್ಷಾಂತರ ಪ್ರಯಾಣಿಕರಿಗೆ ಈ ವಿಮಾನ ನಿಲ್ದಾಣವೇ ನಗರದ ಮೊದಲ ಅನುಭವವಾಗಿದೆ. ಭಾರತೀಯ ಅಂಚೆ ಇಲಾಖೆ ಈ ಗೌರವವು ವಿಮಾನ ನಿಲ್ದಾಣದ ಬೆಳವಣಿಗೆಯನ್ನು ಅರ್ಥಪೂರ್ಣವಾಗಿ ಸ್ಮರಿಸುತ್ತದೆ’ ಎಂದು ಹೇಳಿದರು.</p>.<p>ಭಾರತೀಯ ಅಂಚೆ ಇಲಾಖೆ ಬೆಂಗಳೂರು ಕೇಂದ್ರ ವಲಯದ ಅಂಚೆ ಸೇವೆಗಳ ನಿರ್ದೇಶಕಿ ವಿ.ತಾರಾ ಮಾತನಾಡಿ, ‘ನಗರದ ಪರಂಪರೆ ಮತ್ತು ಜಾಗತಿಕ ಗುರುತಿನ ಪ್ರತೀಕವಾಗಿರುವ ವಿಮಾನ ನಿಲ್ದಾಣವನ್ನು ಗೌರವಿಸುವ ಉದ್ದೇಶದಿಂದ ಈ ಶಾಶ್ವತ ಚಿತ್ರಾತ್ಮಕ ರದ್ದತಿ ಮೊಹರನ್ನು ಬಿಡುಗಡೆ ಮಾಡಲಾಗಿದೆ. ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಾರ್ಡ್ಗಳು ಸಂಗ್ರಹಾಸಕ್ತರಿಗೆ ಅಮೂಲ್ಯ ನೆನಪಾಗಲಿದೆ’ಎಂದು ತಿಳಿಸಿದರು.</p>.<p>ಈ ಶಾಶ್ವತ ಚಿತ್ರಾತ್ಮಕ ಅಂಚೆ ಚೀಟಿ ರದ್ದತಿ ಮೊಹರು ವಿಮಾನ ನಿಲ್ದಾಣದ ಅಂಚೆ ಕಚೇರಿಯಲ್ಲಿ ಲಭ್ಯವಿರಲಿದೆ. ವಿಶೇಷ ಅಂಚೆ ಲಕೋಟೆ ಹಾಗೂ ಅಂಚೆ ಕಾರ್ಡ್ಗಳು ಬೆಂಗಳೂರು ಜಿಪಿಒ ಫಿಲಾಟೆಲಿಕ್ ಬ್ಯೂರೋ ಸೇರಿದಂತೆ ರಾಜ್ಯದ ಪ್ರಮುಖ ಫಿಲಾಟೆಲಿಕ್ ಕೇಂದ್ರಗಳಲ್ಲಿ ಸಿಗಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-15-1617483651</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>