<p><strong>ದೇವನಹಳ್ಳಿ</strong>: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೂಲ್ಯ ವಜ್ರಾಭರಣ ಮತ್ತು ಚಿನ್ನ ಇರುವ ಲಗೇಜ್ ಕಳವು ಆಗಿದೆ. ಈ ಕುರಿತು ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಮೆರಿಕಕ್ಕೆ ಪ್ರಯಾಣಿಸಲು ಕಳೆದ ಡಿಸೆಂಬರ್ನಲ್ಲಿ ಹುಬ್ಬಳ್ಳಿಯ ಶಾಂತ ಎಂಬುವವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇಲ್ಲಿಂದ ಅಬುದಾಬಿ ಮಾರ್ಗವಾಗಿ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಾರೆ.</p>.<p>ವಿಮಾನ ನಿಲ್ದಾಣದಲ್ಲಿ ಲಗೇಜ್ ಚೆಕ್–ಇನ್ ಮಾಡಿವಾಗ ಇಲ್ಲಿರುವ ನಿಯಮಗಳಂತೆ ಎಲ್ಲಾ ರೀತಿಯಲ್ಲಿಯೂ ಪರಿಶೀಲನೆ ಮಾಡಿಕೊಂಡು ಬ್ಯಾಗ್ಗೆ ಮುದ್ರೆ ಹಾಖಿದ ನಂತರೇ ಕ್ಲಿಯರೆನ್ಸ್ ಪಡೆದು ವಿಮಾನ ಹತ್ತಿದ್ದರು. ಆದರೆ ಅಬುದಾಬಿಯಲ್ಲಿ ಲಗೇಜ್ ಸ್ವೀಕರಿಸಲು ತೆರಳಿದಾಗ, ಒಡವೆಗಳಿದ್ದ ಬ್ಯಾಗ್ ಕಾಣೆಯಾಗಿರುವುದು ತಿಳಿದುಬಂದಿದೆ.</p>.<p>ಕಾಣೆಯಾದ ಲಗೇಜ್ನಲ್ಲಿ ಸುಮಾರು 790 ಗ್ರಾಂ ಚಿನ್ನ, ₹8 ಲಕ್ಷ ಮೌಲ್ಯದ ವಜ್ರಾಭರಣ ಹಾಗೂ ಸುಮಾರು ₹20 ಸಾವಿರ ಮೌಲ್ಯದ ಔಷಧಿಗಳು ಇದ್ದವು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.<p>ಈ ಘಟನೆ ಸಂಬಂಧ ಮಹಿಳೆಯೂ ಬೆಂಗಳೂರಿಗೆ ಮರಳಿದ ನಂತರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಲಗೇಜ್ ಹ್ಯಾಂಡ್ಲಿಂಗ್ ಪ್ರಕ್ರಿಯೆ ಹಾಗೂ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಸೇರಿದಂತೆ ತನಿಖೆ ಚುರುಕುಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೂಲ್ಯ ವಜ್ರಾಭರಣ ಮತ್ತು ಚಿನ್ನ ಇರುವ ಲಗೇಜ್ ಕಳವು ಆಗಿದೆ. ಈ ಕುರಿತು ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಮೆರಿಕಕ್ಕೆ ಪ್ರಯಾಣಿಸಲು ಕಳೆದ ಡಿಸೆಂಬರ್ನಲ್ಲಿ ಹುಬ್ಬಳ್ಳಿಯ ಶಾಂತ ಎಂಬುವವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇಲ್ಲಿಂದ ಅಬುದಾಬಿ ಮಾರ್ಗವಾಗಿ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಾರೆ.</p>.<p>ವಿಮಾನ ನಿಲ್ದಾಣದಲ್ಲಿ ಲಗೇಜ್ ಚೆಕ್–ಇನ್ ಮಾಡಿವಾಗ ಇಲ್ಲಿರುವ ನಿಯಮಗಳಂತೆ ಎಲ್ಲಾ ರೀತಿಯಲ್ಲಿಯೂ ಪರಿಶೀಲನೆ ಮಾಡಿಕೊಂಡು ಬ್ಯಾಗ್ಗೆ ಮುದ್ರೆ ಹಾಖಿದ ನಂತರೇ ಕ್ಲಿಯರೆನ್ಸ್ ಪಡೆದು ವಿಮಾನ ಹತ್ತಿದ್ದರು. ಆದರೆ ಅಬುದಾಬಿಯಲ್ಲಿ ಲಗೇಜ್ ಸ್ವೀಕರಿಸಲು ತೆರಳಿದಾಗ, ಒಡವೆಗಳಿದ್ದ ಬ್ಯಾಗ್ ಕಾಣೆಯಾಗಿರುವುದು ತಿಳಿದುಬಂದಿದೆ.</p>.<p>ಕಾಣೆಯಾದ ಲಗೇಜ್ನಲ್ಲಿ ಸುಮಾರು 790 ಗ್ರಾಂ ಚಿನ್ನ, ₹8 ಲಕ್ಷ ಮೌಲ್ಯದ ವಜ್ರಾಭರಣ ಹಾಗೂ ಸುಮಾರು ₹20 ಸಾವಿರ ಮೌಲ್ಯದ ಔಷಧಿಗಳು ಇದ್ದವು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.<p>ಈ ಘಟನೆ ಸಂಬಂಧ ಮಹಿಳೆಯೂ ಬೆಂಗಳೂರಿಗೆ ಮರಳಿದ ನಂತರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಲಗೇಜ್ ಹ್ಯಾಂಡ್ಲಿಂಗ್ ಪ್ರಕ್ರಿಯೆ ಹಾಗೂ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಸೇರಿದಂತೆ ತನಿಖೆ ಚುರುಕುಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>