<p><strong>ಆನೇಕಲ್: </strong>ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳದಲ್ಲಿ ಶುಕ್ರವಾರ ರೈತರು ಮತ್ತು ರೈತ ಮಹಿಳೆಯರು ಒಗ್ಗೂಡಿ ವರಮಹಾಲಕ್ಷ್ಮಿ ಹಬ್ಬ ಆಚರಿಸಿದರು.</p>.<p>ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮದಲ್ಲಿ 32 ದಿನದಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತಿದ್ದು, ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶುಕ್ರವಾರ ಸಂಜೆ ರೈತ ಮಹಿಳೆಯರು ಒಗ್ಗೂಡಿ ಲಕ್ಷ್ಮಿ ದೇವಿ ಮೂರ್ತಿ ಸ್ಥಾಪಿಸಿ ಪೂಜಿಸಿದರು.</p>.<p>ಭಾಗ್ಯದ ಲಕ್ಷ್ಮೀ ಬಾರಮ್ಮ... ಸೇರಿದಂತೆ ಭಕ್ತಿಗೀತೆಗಳು ಮತ್ತು ಭಜನೆ ಹಾಡುವ ಮೂಲಕ ರೈತರು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದರು. ಲಕ್ಷ್ಮೀ ದೇವಿಯ ಕಲಶದೊಂದಿಗೆ ನೇಗಿಲು ಇಟ್ಟು ಪೂಜೆ ಮಾಡಿದ್ದು ವಿಶೇಷವಾಗಿತ್ತು.</p>.<p>ಕೆಐಎಡಿಬಿಯು ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವವರೆಗೂ ಹೋರಾಟ ಮುಂದುವರೆಯಲಿದೆ. ವರಮಹಾಲಕ್ಷ್ಮೀ ಹಬ್ಬವನ್ನು ಇಲ್ಲಿಯೇ ಆಚರಿಸಿದ್ದೇವೆ. ಭೂಸ್ವಾಧೀನ ಪ್ರಕ್ರಿಯೆ ಕೈಬಿಡದಿದ್ದಲ್ಲಿ ಗೌರಿ ಗಣೇಶ, ದೀಪಾವಳಿ ಹಬ್ಬವನ್ನು ಇಲ್ಲಿಯೇ ಆಚರಿಸಲಾಗುವುದು ಎಂದು ರೈತ ಮಹಿಳೆ ಪುಷ್ಪಮ್ಮ ಎಚ್ಚರಿಕೆ ನೀಡಿದರು.</p>.<p>ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರ ಹೋರಾಟದ ಕಿಚ್ಚು ದಿನೇ ದಿನೇ ಹೆಚ್ಚಾಗುತ್ತಿದೆ. ಮುತ್ತಾನಲ್ಲೂರು, ಹಂದೇನಹಳ್ಳಿ ಗ್ರಾಮಗಳಲ್ಲಿ ರೈತರು ಪ್ರತ್ಯೇಕವಾಗಿ ಅಹೋರಾತ್ರಿ ಧರಣಿ ಆರಂಭಿಸಿ ಕೆಐಎಡಿಬಿ ವಿರುದ್ಧ ಧ್ವನಿ ಎತ್ತಿದ್ದಾರೆ.</p>.<div><blockquote>ಪ್ರತಿಭಟನೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ. ರೈತರಿಗೆ ಕೃಷಿಯ ಜೀವನ ಕೃಷಿಯೇ ಅಸ್ತಿತ್ವ. ಹಾಗಾಗಿ ಸರ್ಕಾರ ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು.</blockquote><span class="attribution">–ಪುಷ್ಪಮ್ಮ, ರೈತ ಮಹಿಳೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳದಲ್ಲಿ ಶುಕ್ರವಾರ ರೈತರು ಮತ್ತು ರೈತ ಮಹಿಳೆಯರು ಒಗ್ಗೂಡಿ ವರಮಹಾಲಕ್ಷ್ಮಿ ಹಬ್ಬ ಆಚರಿಸಿದರು.</p>.<p>ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮದಲ್ಲಿ 32 ದಿನದಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತಿದ್ದು, ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶುಕ್ರವಾರ ಸಂಜೆ ರೈತ ಮಹಿಳೆಯರು ಒಗ್ಗೂಡಿ ಲಕ್ಷ್ಮಿ ದೇವಿ ಮೂರ್ತಿ ಸ್ಥಾಪಿಸಿ ಪೂಜಿಸಿದರು.</p>.<p>ಭಾಗ್ಯದ ಲಕ್ಷ್ಮೀ ಬಾರಮ್ಮ... ಸೇರಿದಂತೆ ಭಕ್ತಿಗೀತೆಗಳು ಮತ್ತು ಭಜನೆ ಹಾಡುವ ಮೂಲಕ ರೈತರು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದರು. ಲಕ್ಷ್ಮೀ ದೇವಿಯ ಕಲಶದೊಂದಿಗೆ ನೇಗಿಲು ಇಟ್ಟು ಪೂಜೆ ಮಾಡಿದ್ದು ವಿಶೇಷವಾಗಿತ್ತು.</p>.<p>ಕೆಐಎಡಿಬಿಯು ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವವರೆಗೂ ಹೋರಾಟ ಮುಂದುವರೆಯಲಿದೆ. ವರಮಹಾಲಕ್ಷ್ಮೀ ಹಬ್ಬವನ್ನು ಇಲ್ಲಿಯೇ ಆಚರಿಸಿದ್ದೇವೆ. ಭೂಸ್ವಾಧೀನ ಪ್ರಕ್ರಿಯೆ ಕೈಬಿಡದಿದ್ದಲ್ಲಿ ಗೌರಿ ಗಣೇಶ, ದೀಪಾವಳಿ ಹಬ್ಬವನ್ನು ಇಲ್ಲಿಯೇ ಆಚರಿಸಲಾಗುವುದು ಎಂದು ರೈತ ಮಹಿಳೆ ಪುಷ್ಪಮ್ಮ ಎಚ್ಚರಿಕೆ ನೀಡಿದರು.</p>.<p>ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರ ಹೋರಾಟದ ಕಿಚ್ಚು ದಿನೇ ದಿನೇ ಹೆಚ್ಚಾಗುತ್ತಿದೆ. ಮುತ್ತಾನಲ್ಲೂರು, ಹಂದೇನಹಳ್ಳಿ ಗ್ರಾಮಗಳಲ್ಲಿ ರೈತರು ಪ್ರತ್ಯೇಕವಾಗಿ ಅಹೋರಾತ್ರಿ ಧರಣಿ ಆರಂಭಿಸಿ ಕೆಐಎಡಿಬಿ ವಿರುದ್ಧ ಧ್ವನಿ ಎತ್ತಿದ್ದಾರೆ.</p>.<div><blockquote>ಪ್ರತಿಭಟನೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ. ರೈತರಿಗೆ ಕೃಷಿಯ ಜೀವನ ಕೃಷಿಯೇ ಅಸ್ತಿತ್ವ. ಹಾಗಾಗಿ ಸರ್ಕಾರ ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು.</blockquote><span class="attribution">–ಪುಷ್ಪಮ್ಮ, ರೈತ ಮಹಿಳೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>