<p><strong>ದೊಡ್ಡಬಳ್ಳಾಪುರ</strong>: ಇಲ್ಲಿಯ ಭುವನೇಶ್ವರಿ ನಗರದ ಮುನಿನಂಜಪ್ಪನವರ ಜಮೀನಿನಲ್ಲಿ ಸೋಮವಾರ ಬಣ್ಣ, ಬಣ್ಣದ ತಹರೇವಾರಿ ಗಾಳಿಪಟಗಳು ಆಗಸದಲ್ಲಿ ಚಿತ್ತಾರ ಮೂಡಿಸಿದವು. </p><p>ರಾಜ್ಯಮಟ್ಟದ ಗಾಳಿಪಟ ಉತ್ಸವದಲ್ಲಿ ಬೆಂಗಳೂರು, ಮಂಡ್ಯ, ಬೆಳಗಾವಿ ಮೊದಲಾದ ಕಡೆಗಳಿಂದ ಬಂದಿದ್ದ ಗಾಳಿಪಟ ಕಲಾವಿದರು ಭಾಗವಹಿಸಿದ್ದರು.</p><p>ಕರ್ನಾಟಕ ಜಾನಪದ ಪರಿಷತ್ತು, ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘ ಜಂಟಿಯಾಗಿ ಗಾಳಿಪಟ ಉತ್ಸವ ಆಯೋಜಿಸಿದ್ದವು. ದೊಡ್ಡಬಳ್ಳಾಪುರ ತಾಲ್ಲೂಕಿನ ಮಕ್ಕಳಿಗೆ ಉಚಿತ ಗಾಳಿಪಟ ತಯಾರಿಕೆ ತರಬೇತಿ ನೀಡಲಾಯಿತು.</p><p>ಇದೇ ಸಂದರ್ಭದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕ ಉದ್ಘಾಟಿಸಲಾಯಿತು. </p><p>ಗಾಳಿಪಟ ಕಲೆಯಲ್ಲಿ ದೊಡ್ಡ ಬಳ್ಳಾಪುರ ಖ್ಯಾತಿ ಹೊಂದಿದೆ. ಗಾಳಿಪಟ ಕಲೆಗೆ ಉತ್ತೇಜನ ನೀಡಲು ಜಾನಪದ ಪರಿಷತ್ತು ಯೋಜನೆ ರೂಪಿಸಬೇಕಿದೆ ಎಂದು ಶಾಸಕ ಧೀರಜ್ ಮುನಿರಾಜು ಸಲಹೆ ಮಾಡಿದರು.</p><p>ಜಾನಪದ ಸಂಸ್ಕೃತಿಯಲ್ಲಿ ಜನರ ಭಾವೈಕ್ಯತೆಗೆ ಪೂರಕವಾದ ಗ್ರಾಮೀಣ ಕ್ರೀಡೆಗಳು, ಉತ್ಸವಗಳು ಹಿಂದಿನಿಂದಲೂ ಆಚರಣೆ ಮಾಡುತ್ತಾ ಬರಲಾಗಿದೆ. ಜನರ ಸಾಮೂಹಿಕ ಭಾಗವಹಿಸುವಿಕೆಗೆ ಇಂಬು ನೀಡುತ್ತವೆ. ಇತ್ತೀಚೆಗೆ ಕಬಡ್ಡಿ, ಕೊಕ್ಕೊ ಮೊದಲಾದ ಗ್ರಾಮೀಣ ಕ್ರೀಡೆಗಳು ಕಾರ್ಪೋರೇಟ್ ವ್ಯವಸ್ಥೆಗೆ ಸಿಕ್ಕಿ ಹಣ ಮಾಡಲು ಬಳಸಿಕೊಳ್ಳ ಲಾಗುತ್ತಿದೆ. ಈ ದಿಸೆಯಲ್ಲಿ ಜಾನಪದ ಕಲೆ ಉಳಿಸಿ ಬೆಳೆಸಬೇಕಾದರೆ ಜನರ ಭಾಗವಹಿಸುವಿಕೆ ಮುಖ್ಯ ಎಂದು ಚಿಂತಕ ಪ್ರೊ.ಎಂ.ಜಿ.ಚಂದ್ರಶೇಖರಯ್ಯ ಹೇಳಿದರು.</p><p>ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ಮಾತನಾಡಿ, ಜಾನಪದ ತಜ್ಞ ಎಚ್.ಎಲ್.ನಾಗೇಗೌಡರ ಪರಿಶ್ರಮದಿಂದ ರೂಪುಗೊಂಡಿರುವ ಕರ್ನಾಟಕ ಜಾನಪದ ಪರಿಷತ್ತು ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಗಾಳಿಪಟದ ಬಗ್ಗೆ ಪ್ರಚುರಪಡಿಸಲು ಸ್ಪರ್ಧೆಗಳನ್ನು ಏರ್ಪಡಿಸುತ್ತಾ ಬರುತ್ತಿದೆ ಎಂದರು.</p><p>ಎಂ.ವೆಂಕಟರಾಜು (ಡೋಲು ವಾದಕ), ಕೆ.ಪಿ.ಪ್ರಕಾಶ್ (ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ), ಗಂಗಾಧರ (ಯಕ್ಷಗಾನ ಭಾಗವತ), ಪೈಲ್ವಾನ್ ಪಿಳ್ಳಪ್ಪ (ಕ್ರೀಡೆ) ಇವರನ್ನು ಸನ್ಮಾನಿಸಲಾಯಿತು.</p><p>ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ಅಧ್ಯಕ್ಷ ಎಲ್.ಎನ್.ಶ್ರೀನಾಥ್, ಆದಿತ್ಯ ನಂಜರಾಜ್, ಆರ್.ಲಕ್ಷ್ಮಿಪತಿ, ಕೆ.ಬಿ.ಮುದ್ದಪ್ಪ, ಎ.ಎನ್.ಪ್ರಕಾಶ್, ಎಸ್.ಮುನಿರಾಜು, ವಿಶ್ವನಾಥ್, ಜೆ.ವಿ.ಸುಬ್ರಹ್ಮಣ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ಇಲ್ಲಿಯ ಭುವನೇಶ್ವರಿ ನಗರದ ಮುನಿನಂಜಪ್ಪನವರ ಜಮೀನಿನಲ್ಲಿ ಸೋಮವಾರ ಬಣ್ಣ, ಬಣ್ಣದ ತಹರೇವಾರಿ ಗಾಳಿಪಟಗಳು ಆಗಸದಲ್ಲಿ ಚಿತ್ತಾರ ಮೂಡಿಸಿದವು. </p><p>ರಾಜ್ಯಮಟ್ಟದ ಗಾಳಿಪಟ ಉತ್ಸವದಲ್ಲಿ ಬೆಂಗಳೂರು, ಮಂಡ್ಯ, ಬೆಳಗಾವಿ ಮೊದಲಾದ ಕಡೆಗಳಿಂದ ಬಂದಿದ್ದ ಗಾಳಿಪಟ ಕಲಾವಿದರು ಭಾಗವಹಿಸಿದ್ದರು.</p><p>ಕರ್ನಾಟಕ ಜಾನಪದ ಪರಿಷತ್ತು, ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘ ಜಂಟಿಯಾಗಿ ಗಾಳಿಪಟ ಉತ್ಸವ ಆಯೋಜಿಸಿದ್ದವು. ದೊಡ್ಡಬಳ್ಳಾಪುರ ತಾಲ್ಲೂಕಿನ ಮಕ್ಕಳಿಗೆ ಉಚಿತ ಗಾಳಿಪಟ ತಯಾರಿಕೆ ತರಬೇತಿ ನೀಡಲಾಯಿತು.</p><p>ಇದೇ ಸಂದರ್ಭದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕ ಉದ್ಘಾಟಿಸಲಾಯಿತು. </p><p>ಗಾಳಿಪಟ ಕಲೆಯಲ್ಲಿ ದೊಡ್ಡ ಬಳ್ಳಾಪುರ ಖ್ಯಾತಿ ಹೊಂದಿದೆ. ಗಾಳಿಪಟ ಕಲೆಗೆ ಉತ್ತೇಜನ ನೀಡಲು ಜಾನಪದ ಪರಿಷತ್ತು ಯೋಜನೆ ರೂಪಿಸಬೇಕಿದೆ ಎಂದು ಶಾಸಕ ಧೀರಜ್ ಮುನಿರಾಜು ಸಲಹೆ ಮಾಡಿದರು.</p><p>ಜಾನಪದ ಸಂಸ್ಕೃತಿಯಲ್ಲಿ ಜನರ ಭಾವೈಕ್ಯತೆಗೆ ಪೂರಕವಾದ ಗ್ರಾಮೀಣ ಕ್ರೀಡೆಗಳು, ಉತ್ಸವಗಳು ಹಿಂದಿನಿಂದಲೂ ಆಚರಣೆ ಮಾಡುತ್ತಾ ಬರಲಾಗಿದೆ. ಜನರ ಸಾಮೂಹಿಕ ಭಾಗವಹಿಸುವಿಕೆಗೆ ಇಂಬು ನೀಡುತ್ತವೆ. ಇತ್ತೀಚೆಗೆ ಕಬಡ್ಡಿ, ಕೊಕ್ಕೊ ಮೊದಲಾದ ಗ್ರಾಮೀಣ ಕ್ರೀಡೆಗಳು ಕಾರ್ಪೋರೇಟ್ ವ್ಯವಸ್ಥೆಗೆ ಸಿಕ್ಕಿ ಹಣ ಮಾಡಲು ಬಳಸಿಕೊಳ್ಳ ಲಾಗುತ್ತಿದೆ. ಈ ದಿಸೆಯಲ್ಲಿ ಜಾನಪದ ಕಲೆ ಉಳಿಸಿ ಬೆಳೆಸಬೇಕಾದರೆ ಜನರ ಭಾಗವಹಿಸುವಿಕೆ ಮುಖ್ಯ ಎಂದು ಚಿಂತಕ ಪ್ರೊ.ಎಂ.ಜಿ.ಚಂದ್ರಶೇಖರಯ್ಯ ಹೇಳಿದರು.</p><p>ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ಮಾತನಾಡಿ, ಜಾನಪದ ತಜ್ಞ ಎಚ್.ಎಲ್.ನಾಗೇಗೌಡರ ಪರಿಶ್ರಮದಿಂದ ರೂಪುಗೊಂಡಿರುವ ಕರ್ನಾಟಕ ಜಾನಪದ ಪರಿಷತ್ತು ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಗಾಳಿಪಟದ ಬಗ್ಗೆ ಪ್ರಚುರಪಡಿಸಲು ಸ್ಪರ್ಧೆಗಳನ್ನು ಏರ್ಪಡಿಸುತ್ತಾ ಬರುತ್ತಿದೆ ಎಂದರು.</p><p>ಎಂ.ವೆಂಕಟರಾಜು (ಡೋಲು ವಾದಕ), ಕೆ.ಪಿ.ಪ್ರಕಾಶ್ (ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ), ಗಂಗಾಧರ (ಯಕ್ಷಗಾನ ಭಾಗವತ), ಪೈಲ್ವಾನ್ ಪಿಳ್ಳಪ್ಪ (ಕ್ರೀಡೆ) ಇವರನ್ನು ಸನ್ಮಾನಿಸಲಾಯಿತು.</p><p>ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ಅಧ್ಯಕ್ಷ ಎಲ್.ಎನ್.ಶ್ರೀನಾಥ್, ಆದಿತ್ಯ ನಂಜರಾಜ್, ಆರ್.ಲಕ್ಷ್ಮಿಪತಿ, ಕೆ.ಬಿ.ಮುದ್ದಪ್ಪ, ಎ.ಎನ್.ಪ್ರಕಾಶ್, ಎಸ್.ಮುನಿರಾಜು, ವಿಶ್ವನಾಥ್, ಜೆ.ವಿ.ಸುಬ್ರಹ್ಮಣ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>