<p>ಪ್ರಜಾವಾಣಿ ವಾರ್ತೆ</p>.<p>ಕುಂದಾಣ (ದೇವನಹಳ್ಳಿ): ತಾಲ್ಲೂಕಿನ ಕೊಯಿರಾ ಗ್ರಾಮದ ಭೀಮೇಶ್ವರ ಸ್ವಾಮಿ ಸನ್ನಿಧಿ ಆವರಣದಲ್ಲಿ ಈಚೆಗೆ ಕುಂದಾಣ ಹಿಂದೂ ಸಮಾಜೋತ್ಸವ ಸಮಿತಿಯಿಂದ ಹಿಂದೂ ಸಮಾಜೋತ್ಸವ ನಡೆಯಿತು.</p>.<p>ಶಿಕ್ಷಕ ಮಲ್ಲಿಕಾರ್ಜುನ ಗಣಿ ಮಾತನಾಡಿ, ದೇಶದ ಸಮಗ್ರ ಅಭಿವೃದ್ಧಿಗೆ ಹಿಂದೂ ಧರ್ಮದ ಸಂಸ್ಕೃತಿ, ಆಚಾರ–ವಿಚಾರಗಳ ಅರಿವು ಪ್ರತಿಯೊಬ್ಬರಲ್ಲೂ ಬೆಳೆಬೇಕು ಎಂದರು.</p>.<p>ದೇಶದ ಸಂಸ್ಕೃತಿ ಮತ್ತು ಪರಂಪರೆ ನಮ್ಮದು ಎಂಬ ಭಾವನೆ ಮಕ್ಕಳಲ್ಲೇ ಬೆಳೆಬೇಕು. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ನಮ್ಮ ಧಾರ್ಮಿಕ ಮೌಲ್ಯಗಳನ್ನೂ ಬೋಧಿಸಬೇಕು ಎಂದು ತಿಳಿಸಿದರು.</p>.<p>ಅವಧೂತ ನರಸಿಂಹಮೂರ್ತಿ ಸ್ವಾಮೀಜಿ, ಹಿಂದೂ ಸಮಾಜದ ಮೂಲ ನಂಬಿಕೆ ಮಾನವೀಯ ಧರ್ಮದಲ್ಲಿದೆ. ‘ನಾನು ಮೊದಲು ಭಾರತೀಯ, ನಂತರ ಹಿಂದೂ’ ಎಂಬ ಆತ್ಮಗೌರವ ಪ್ರತಿಯೊಬ್ಬರಲ್ಲೂ ಮೂಡಬೇಕು. ಎಲ್ಲರನ್ನು ಸಮಾನವಾಗಿ ಕಾಣುವುದು ನಮ್ಮ ಸಂಸ್ಕೃತಿಯ ವೈಶಿಷ್ಟ್ಯ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಕುಂದಾಣ (ದೇವನಹಳ್ಳಿ): ತಾಲ್ಲೂಕಿನ ಕೊಯಿರಾ ಗ್ರಾಮದ ಭೀಮೇಶ್ವರ ಸ್ವಾಮಿ ಸನ್ನಿಧಿ ಆವರಣದಲ್ಲಿ ಈಚೆಗೆ ಕುಂದಾಣ ಹಿಂದೂ ಸಮಾಜೋತ್ಸವ ಸಮಿತಿಯಿಂದ ಹಿಂದೂ ಸಮಾಜೋತ್ಸವ ನಡೆಯಿತು.</p>.<p>ಶಿಕ್ಷಕ ಮಲ್ಲಿಕಾರ್ಜುನ ಗಣಿ ಮಾತನಾಡಿ, ದೇಶದ ಸಮಗ್ರ ಅಭಿವೃದ್ಧಿಗೆ ಹಿಂದೂ ಧರ್ಮದ ಸಂಸ್ಕೃತಿ, ಆಚಾರ–ವಿಚಾರಗಳ ಅರಿವು ಪ್ರತಿಯೊಬ್ಬರಲ್ಲೂ ಬೆಳೆಬೇಕು ಎಂದರು.</p>.<p>ದೇಶದ ಸಂಸ್ಕೃತಿ ಮತ್ತು ಪರಂಪರೆ ನಮ್ಮದು ಎಂಬ ಭಾವನೆ ಮಕ್ಕಳಲ್ಲೇ ಬೆಳೆಬೇಕು. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ನಮ್ಮ ಧಾರ್ಮಿಕ ಮೌಲ್ಯಗಳನ್ನೂ ಬೋಧಿಸಬೇಕು ಎಂದು ತಿಳಿಸಿದರು.</p>.<p>ಅವಧೂತ ನರಸಿಂಹಮೂರ್ತಿ ಸ್ವಾಮೀಜಿ, ಹಿಂದೂ ಸಮಾಜದ ಮೂಲ ನಂಬಿಕೆ ಮಾನವೀಯ ಧರ್ಮದಲ್ಲಿದೆ. ‘ನಾನು ಮೊದಲು ಭಾರತೀಯ, ನಂತರ ಹಿಂದೂ’ ಎಂಬ ಆತ್ಮಗೌರವ ಪ್ರತಿಯೊಬ್ಬರಲ್ಲೂ ಮೂಡಬೇಕು. ಎಲ್ಲರನ್ನು ಸಮಾನವಾಗಿ ಕಾಣುವುದು ನಮ್ಮ ಸಂಸ್ಕೃತಿಯ ವೈಶಿಷ್ಟ್ಯ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>