ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ಸರಳ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Last Updated 11 ಸೆಪ್ಟೆಂಬರ್ 2020, 2:13 IST
ಅಕ್ಷರ ಗಾತ್ರ

ದೇವನಹಳ್ಳಿ: ತಾಲ್ಲೂಕಿನ ಯಾದವ ಸಮುದಾಯದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲಾಯಿತು. ಇಲ್ಲಿನ ಐತಿಹಾಸಿಕ ಕೋಟೆ ಶ್ರೀ ವೇಣುಗೋಪಾಲಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪಂಚಾಂಗದ ಪ್ರಕಾರ ರೋಹಿಣಿ ನಕ್ಷತ್ರದ ದಿನದಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದೆ.

ಕೆ.ಪಿ.ಸಿ.ಸಿ.ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸಿ.ಜಗನ್ನಾಥ್ ಮಾತನಾಡಿ, ‘ತಾಲ್ಲೂಕಿನಲ್ಲಿ ಯಾದವ ಸಮುದಾಯ 13 ಸಾವಿರದಷ್ಟಿದೆ. ಈ ಬಾರಿ ಸರಳ ಆಚರಣೆಯ ಜೊತೆಗೆ ಸೋಂಕಿನ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ಹೇಳಿದರು.

ಕೆಪಿಸಿಸಿ ರಾಜ್ಯ ಘಟಕ ಕಾರ್ಯದರ್ಶಿ ಎ.ಸಿ ಶ್ರೀನಿವಾಸ್ ಮಾತನಾಡಿ, ‘ಸನಾತನ ಪರಂಪರೆಯಲ್ಲಿ ನಡೆದುಕೊಂಡು ಬರುತ್ತಿರುವ ಧಾರ್ಮಿಕ ಅಚರಣೆಗಳ ಹಿಂದೆ ವೈಜ್ಞಾನಿಕ ಉದ್ದೇಶವಿದೆ. ಸಮಾನತೆ, ಪರಸ್ಪರ ವಿಶ್ವಾಸ ಮೂಡಿಸುವುದು, ಬಾಂಧವ್ಯದ ಬೇಸುಗೆ, ಒಗ್ಗಟ್ಟು ಸಾಮೂಹಿಕ ಆಚರಣೆಯಿಂದ ಸಾಧ್ಯವಾಗುತ್ತದೆ ಎಂಬ ನಂಬಿಕೆಯಿಂದ ಆಚರಣೆ ಸಾಗಿಬಂದಿದೆ’ ಎಂದರು.

ತಾಲ್ಲೂಕು ಯಾದವ ಸಂಘ ಅಧ್ಯಕ್ಷ ಎನ್.ರಘು ಉಪಾಧ್ಯಕ್ಷ ಜಿಂಕಲ ಮುನಿರಾಜು, ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ, ಖಜಾಂಚಿ ಶ್ರೀಧರ ಮೂರ್ತಿ, ಪುರಸಭೆ ಸದಸ್ಯರಾದ ಬಾಂಬೆ ನಾರಾಯಣಸ್ವಾಮಿ, ವೇಣುಗೋಪಾಲ್, ಮಂಜುನಾಥ್, ವಿ.ಗೋಪಾಲ್, ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಸುಮಂತ್, ಮುಖಂಡರಾದ ಬಿ.ಕೆ.ನಾರಾಯಣಸ್ವಾಮಿ, ಜಿ.ಚಂದ್ರಣ್ಣ, ಎಂ.ಮೂರ್ತಿ, ಮರಿಯಪ್ಪ, ನಾರಾಯಣಸ್ವಾಮಿ, ಆನಂದ್, ಸೋಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT