ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ನಿಂತಿದ್ದ ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ

Last Updated 31 ಮೇ 2022, 10:01 IST
ಅಕ್ಷರ ಗಾತ್ರ

ದೇವನಹಳ್ಳಿ:ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಂಗಳವಾರ ಡಿಕ್ಕಿ ಹೊಡೆದಿದೆ.

ದೇವನಹಳ್ಳಿ ತಾಲ್ಲೂಕಿನ ಚಿಕ್ಕಸಣ್ಣೆ ಗೇಟ್ ಬಳಿ ಅವಘಡ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದೆ.ಸಣ್ಣಪುಟ್ಟ ಗಾಯಗಳಾಗಿದ್ದರೂ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಲ್ಲಿನ ಲೋಡ್ ತುಂಬಿದ್ದ ಟ್ರ್ಯಾಕ್ಟರ್ ಪಂಕ್ಚರ್ ಆಗಿ ರಸ್ತೆಯಲ್ಲಿ ನಿಂತಿತ್ತು. ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌, ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆಯುವುದಕ್ಕೂ ಮುನ್ನ ಕಾರೊಂದಕ್ಕೆ ಗುದ್ದಿತ್ತು. ಆದರೆ,ಡಿವೈಡರ್‌ಗೆಡಿಕ್ಕಿ ಹೊಡೆದ ಕಾರಣ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದರು.

ಘಟನೆ ಬಳಿಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ ವಿಭಾಗದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT