ನೆಲಮಂಗಲ ತಾಲ್ಲೂಕು ಸೇರಿದಂತೆ ಬೂದಿಹಾಳ್ ಗ್ರಾ.ಪಂ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಕುಂದಾಣ ಪಂಚಾಯಿತಿಯಲ್ಲಿ ಪಿಡಿಒ ಆಗಿದ್ದರು. ತಾಲೂಕಿನ ಬೂದಿಹಾಳ್ ಗ್ರಾಮ ಪಂಚಾಯಿತಿ ನೂತನ ಗ್ರಾಮಸೌಧ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆಸಿ ಸರ್ಕಾರದ ಹಣ ದುರ್ಬಳಕೆ ಮಾಡಿದ್ದಾರೆಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಟಿ.ಜಿ.ಗಂಗಾಧರ್ ಎಂಬುವವರು ಸರ್ಕಾರ ಹಾಗೂ ಸಕ್ಷಮ ಶಿಸ್ತು ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರು.