<p><strong>ದೊಡ್ಡಬಳ್ಳಾಪುರ:</strong>ಬಾಲ್ಯವಿವಾಹ ಮತ್ತು ಹದಿನೆಂಟು ವರ್ಷದ ಒಳಗಿನ ಮಕ್ಕಳ ಮೇಲಿನ ಲೈಂಗಿಕ ಕಿರುಕುಳದ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಿಗೆ ಜಾಗೃತಿಯ ಕೊರತೆಯೇ ಇಂತಹ ಕೃತ್ಯಗಳು ಹೆಚ್ಚಾಗಲು ಕಾರಣವಾಗಿದೆ ಎಂದು ಜಿಲ್ಲಾ ಮಕ್ಕಳ ಸಹಾಯವಾಣಿ ಸಂಯೋಜಕ ಎಸ್.ಪಿ. ಮಂಜುನಾಥ್ ಹೇಳಿದರು.</p>.<p>ಅವರು ನಗರದ ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆ, ಮಕ್ಕಳ ಸಹಾಯವಾಣಿ-1098 ವತಿಯಿಂದ ಸಾಸಲು ಹೋಬಳಿ ಹಾಗೂ ತೂಬಗೆರೆ ಹೋಬಳಿ ವ್ಯಾಪ್ತಿಗೆ ಬರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಬಾಲ್ಯವಿವಾಹ ಮತ್ತು ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು</p>.<p>ಬಾಲ್ಯವಿವಾಹದಿಂದ ದೈಹಿಕ ಹಾಗೂ ಮಾನಸಿಕವಾಗಿ ಪ್ರಭಾವ ಬೀರಲಿದ್ದು, ಈ ಬಗ್ಗೆ ಅರಿವು ಅಗತ್ಯವಾಗಿದೆ. ಬಾಲ್ಯವಿವಾಹದಿಂದ ದೈಹಿಕ ಹಾಗೂ ಮಾನಸಿಕವಾಗಿ ಹಲವಾರು ತೊಂದರೆಗಳಾಗುತ್ತವೆ. ಚಿಕ್ಕವಯಸ್ಸಿನಲ್ಲಿಯೇ ಗರ್ಭ ಧರಿಸುವುದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಕಾಡುತ್ತವೆ ಎಂದು ಹೇಳಿದರು.</p>.<p>ಮಕ್ಕಳ ಮೇಲೆ ಲೈಂಗಿಕ ಕಿರುಕುಳಗಳಾಗುತ್ತಿದ್ದರೆ ತಕ್ಷಣವೇ ಮಕ್ಕಳ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಪ್ರಮುಖವಾಗಿ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಸಹಾಯವಾಣಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕಿದೆ ಎಂದರು.</p>.<p>ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆಯ ಕಾರ್ಯದರ್ಶಿ ಅಮಲಿನಾಯಕ್ ಮಾತನಾಡಿ, ಕೊರೊನಾದಿಂದಾಗಿ ಬಾಲ್ಯವಿವಾಹಗಳು ಹೆಚ್ಚಾಗುತ್ತಿವೆ. ಇದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಬಾಲ್ಯವಿವಾಹ ತಡೆಯುವಲ್ಲಿ ಹೆಚ್ಚಿನ ಗಮನಹರಿಸಬೇಕಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿಯ ತಾಲ್ಲೂಕು ಸಂಯೋಜಕ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಯಾದ ರಶ್ಮಿ ಸೊಬರದ್,ಅ ಕ್ಷತಾಗೊಂಬಿ, ತಂಡದ ಸದಸ್ಯರಾದ ಶಶಿಕುಮಾರ್, ಕೆ.ಆರ್. ನರಸಿಂಹರಾಜು, ಶ್ಯಾಮಲಾ ಇದ್ದರು. ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಆರೋಗ್ಯ ರಕ್ಷಕ ಪರಿಕರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong>ಬಾಲ್ಯವಿವಾಹ ಮತ್ತು ಹದಿನೆಂಟು ವರ್ಷದ ಒಳಗಿನ ಮಕ್ಕಳ ಮೇಲಿನ ಲೈಂಗಿಕ ಕಿರುಕುಳದ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಿಗೆ ಜಾಗೃತಿಯ ಕೊರತೆಯೇ ಇಂತಹ ಕೃತ್ಯಗಳು ಹೆಚ್ಚಾಗಲು ಕಾರಣವಾಗಿದೆ ಎಂದು ಜಿಲ್ಲಾ ಮಕ್ಕಳ ಸಹಾಯವಾಣಿ ಸಂಯೋಜಕ ಎಸ್.ಪಿ. ಮಂಜುನಾಥ್ ಹೇಳಿದರು.</p>.<p>ಅವರು ನಗರದ ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆ, ಮಕ್ಕಳ ಸಹಾಯವಾಣಿ-1098 ವತಿಯಿಂದ ಸಾಸಲು ಹೋಬಳಿ ಹಾಗೂ ತೂಬಗೆರೆ ಹೋಬಳಿ ವ್ಯಾಪ್ತಿಗೆ ಬರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಬಾಲ್ಯವಿವಾಹ ಮತ್ತು ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು</p>.<p>ಬಾಲ್ಯವಿವಾಹದಿಂದ ದೈಹಿಕ ಹಾಗೂ ಮಾನಸಿಕವಾಗಿ ಪ್ರಭಾವ ಬೀರಲಿದ್ದು, ಈ ಬಗ್ಗೆ ಅರಿವು ಅಗತ್ಯವಾಗಿದೆ. ಬಾಲ್ಯವಿವಾಹದಿಂದ ದೈಹಿಕ ಹಾಗೂ ಮಾನಸಿಕವಾಗಿ ಹಲವಾರು ತೊಂದರೆಗಳಾಗುತ್ತವೆ. ಚಿಕ್ಕವಯಸ್ಸಿನಲ್ಲಿಯೇ ಗರ್ಭ ಧರಿಸುವುದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಕಾಡುತ್ತವೆ ಎಂದು ಹೇಳಿದರು.</p>.<p>ಮಕ್ಕಳ ಮೇಲೆ ಲೈಂಗಿಕ ಕಿರುಕುಳಗಳಾಗುತ್ತಿದ್ದರೆ ತಕ್ಷಣವೇ ಮಕ್ಕಳ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಪ್ರಮುಖವಾಗಿ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಸಹಾಯವಾಣಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕಿದೆ ಎಂದರು.</p>.<p>ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆಯ ಕಾರ್ಯದರ್ಶಿ ಅಮಲಿನಾಯಕ್ ಮಾತನಾಡಿ, ಕೊರೊನಾದಿಂದಾಗಿ ಬಾಲ್ಯವಿವಾಹಗಳು ಹೆಚ್ಚಾಗುತ್ತಿವೆ. ಇದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಬಾಲ್ಯವಿವಾಹ ತಡೆಯುವಲ್ಲಿ ಹೆಚ್ಚಿನ ಗಮನಹರಿಸಬೇಕಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿಯ ತಾಲ್ಲೂಕು ಸಂಯೋಜಕ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಯಾದ ರಶ್ಮಿ ಸೊಬರದ್,ಅ ಕ್ಷತಾಗೊಂಬಿ, ತಂಡದ ಸದಸ್ಯರಾದ ಶಶಿಕುಮಾರ್, ಕೆ.ಆರ್. ನರಸಿಂಹರಾಜು, ಶ್ಯಾಮಲಾ ಇದ್ದರು. ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಆರೋಗ್ಯ ರಕ್ಷಕ ಪರಿಕರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>