<p><strong>ವಿಜಯಪುರ(ದೇವನಹಳ್ಳಿ):</strong> ಹೋಬಳಿಯ ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನುವಂಡನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಳೆ ಕಟ್ಟಡದಲ್ಲಿದ್ದು, ಮೂಲ ಸೌಕರ್ಯ ಕೊರತೆಯಿಂದ ಕಲಿಕಾ ವಾತಾವರಣವೇ ಮಾಯವಾಗಿದೆ.</p>.<p>ಶಾಲೆಯಲ್ಲಿ ಒಂದು ಕೊಠಡಿ ಮಾತ್ರವೇ ಇದ್ದು, ಒಂದೇ ಕೊಠಡಿಯಲ್ಲಿ ಶಾಲೆಗೆ ಸಂಬಂಧಿಸಿದ ಬೀರುಗಳು, ಬೆಂಚುಗಳು, ಕಲಿಕೋಪಕರಣಗಳನ್ನು ಇಡಲಾಗಿದೆ. ಇಲ್ಲಿ 5 ವಿದ್ಯಾರ್ಥಿಗಳು ಮಾತ್ರ ಓದುತ್ತಿದ್ದಾರೆ. ಮೂರು ಬಾಲಕರು, ಇಬ್ಬರು ಬಾಲಕಿಯರು ಇದ್ದಾರೆ. ಇಲ್ಲಿನ ವಾತಾವರಣದಿಂದಾಗಿ ಶಾಲೆಗೆ ಮಕ್ಕಳನ್ನು ದಾಖಲು ಮಾಡಿಸಲು ಯಾರೂ ಆಸಕ್ತಿ ತೋರಿಸುತ್ತಿಲ್ಲ. ಒಬ್ಬ ಶಿಕ್ಷಕ ಇದ್ದಾರೆ.</p>.<p>ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಶೌಚಾಲಯವಿಲ್ಲ. ಶಾಲೆಯ ಹಿಂದೆ ಇರುವ ಶೌಚಾಲಯ ಉಪಯೋಗಕ್ಕೆ ಬಾರದ ಸ್ಥಿತಿಯಲ್ಲಿದೆ. ಬಾಲಕರು ಮೂತ್ರವಿಸರ್ಜನೆಗೆ ಉಪಯೋಗಿಸುತ್ತಿರುವ ಮೂತ್ರಾಲಯದಲ್ಲಿ ದುರ್ವಾಸನೆ ಬೀರುತ್ತಿದೆ. ಶಾಲಾ ಕೊಠಡಿಯ ಮೇಲ್ಛಾವಣಿ ಸೋರುತ್ತಿದೆ. ಮಳೆಗಾಲದಲ್ಲಿ ಇಲ್ಲಿಗೆ ಮಕ್ಕಳನ್ನು ಕಳುಹಿಸಲು ಭಯವಾಗುತ್ತದೆ ಎನ್ನುತ್ತಾರೆ ಪೋಷಕರು.</p>.<p>1974ರಲ್ಲಿ ಕಟ್ಟಿರುವ ಈ ಶಾಲೆಯ ಮೇಲ್ಛಾವಣಿ ಚಪ್ಪಡಿ ಕಲ್ಲಿನಿಂದ ಕೂಡಿವೆ. ಶಾಲೆಯ ಮುಂಭಾಗದಲ್ಲಿನ ಗೇಟ್ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದಿರುವ ಕಾರಣ, ಗೇಟು ಇಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು, ಗಮನಹರಿಸಿ, ಶಾಲಾ ಕಟ್ಟಡ ದುರಸ್ತಿಗೊಳಿಸಬೇಕೆಂದು ಪೋಷಕರು ಒತ್ತಾಯಿಸಿದ್ದಾರೆ.</p>.<div><blockquote>ಶಾಲೆ ದುರಸ್ಥಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಶಾಲೆಯ ವಾತಾವರಣ ಉತ್ತಮಪಡಿಸಲು ಪ್ರಯತ್ನಿಸಲಾಗುತ್ತಿದೆ</blockquote><span class="attribution"> ಮುನೇಗೌಡ ಶಾಲೆಯ ಶಿಕ್ಷಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ(ದೇವನಹಳ್ಳಿ):</strong> ಹೋಬಳಿಯ ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನುವಂಡನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಳೆ ಕಟ್ಟಡದಲ್ಲಿದ್ದು, ಮೂಲ ಸೌಕರ್ಯ ಕೊರತೆಯಿಂದ ಕಲಿಕಾ ವಾತಾವರಣವೇ ಮಾಯವಾಗಿದೆ.</p>.<p>ಶಾಲೆಯಲ್ಲಿ ಒಂದು ಕೊಠಡಿ ಮಾತ್ರವೇ ಇದ್ದು, ಒಂದೇ ಕೊಠಡಿಯಲ್ಲಿ ಶಾಲೆಗೆ ಸಂಬಂಧಿಸಿದ ಬೀರುಗಳು, ಬೆಂಚುಗಳು, ಕಲಿಕೋಪಕರಣಗಳನ್ನು ಇಡಲಾಗಿದೆ. ಇಲ್ಲಿ 5 ವಿದ್ಯಾರ್ಥಿಗಳು ಮಾತ್ರ ಓದುತ್ತಿದ್ದಾರೆ. ಮೂರು ಬಾಲಕರು, ಇಬ್ಬರು ಬಾಲಕಿಯರು ಇದ್ದಾರೆ. ಇಲ್ಲಿನ ವಾತಾವರಣದಿಂದಾಗಿ ಶಾಲೆಗೆ ಮಕ್ಕಳನ್ನು ದಾಖಲು ಮಾಡಿಸಲು ಯಾರೂ ಆಸಕ್ತಿ ತೋರಿಸುತ್ತಿಲ್ಲ. ಒಬ್ಬ ಶಿಕ್ಷಕ ಇದ್ದಾರೆ.</p>.<p>ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಶೌಚಾಲಯವಿಲ್ಲ. ಶಾಲೆಯ ಹಿಂದೆ ಇರುವ ಶೌಚಾಲಯ ಉಪಯೋಗಕ್ಕೆ ಬಾರದ ಸ್ಥಿತಿಯಲ್ಲಿದೆ. ಬಾಲಕರು ಮೂತ್ರವಿಸರ್ಜನೆಗೆ ಉಪಯೋಗಿಸುತ್ತಿರುವ ಮೂತ್ರಾಲಯದಲ್ಲಿ ದುರ್ವಾಸನೆ ಬೀರುತ್ತಿದೆ. ಶಾಲಾ ಕೊಠಡಿಯ ಮೇಲ್ಛಾವಣಿ ಸೋರುತ್ತಿದೆ. ಮಳೆಗಾಲದಲ್ಲಿ ಇಲ್ಲಿಗೆ ಮಕ್ಕಳನ್ನು ಕಳುಹಿಸಲು ಭಯವಾಗುತ್ತದೆ ಎನ್ನುತ್ತಾರೆ ಪೋಷಕರು.</p>.<p>1974ರಲ್ಲಿ ಕಟ್ಟಿರುವ ಈ ಶಾಲೆಯ ಮೇಲ್ಛಾವಣಿ ಚಪ್ಪಡಿ ಕಲ್ಲಿನಿಂದ ಕೂಡಿವೆ. ಶಾಲೆಯ ಮುಂಭಾಗದಲ್ಲಿನ ಗೇಟ್ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದಿರುವ ಕಾರಣ, ಗೇಟು ಇಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು, ಗಮನಹರಿಸಿ, ಶಾಲಾ ಕಟ್ಟಡ ದುರಸ್ತಿಗೊಳಿಸಬೇಕೆಂದು ಪೋಷಕರು ಒತ್ತಾಯಿಸಿದ್ದಾರೆ.</p>.<div><blockquote>ಶಾಲೆ ದುರಸ್ಥಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಶಾಲೆಯ ವಾತಾವರಣ ಉತ್ತಮಪಡಿಸಲು ಪ್ರಯತ್ನಿಸಲಾಗುತ್ತಿದೆ</blockquote><span class="attribution"> ಮುನೇಗೌಡ ಶಾಲೆಯ ಶಿಕ್ಷಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>