ದುರಸ್ತಿಗೆ ಕಾದಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕವಡಗೆರೆ ಗ್ರಾಮದ ಸರ್ಕಾರಿ ಶಾಲಾ ಕೊಠಡಿ
ತುರ್ತು ದುರಸ್ತಿ ಆಗಬೇಕಿರುವ 15 ಶಾಲಾ ಕೊಠಡಿಗಳಿಗೆ ಶಾಸಕರ ನಿಧಿಯಿಂದ ಹಣ ನೀಡಿದ್ದಾರೆ. ಉಳಿದಂತೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡುವ ಕುರಿತಂತೆ ಶಿಕ್ಷಣ ಸಚಿವರು ಈಚೆಗೆ ನಡೆದ ಸಭೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪಟ್ಟಿ ನೀಡುವಂತೆಯು ಸೂಚಿಸಿದ್ದಾರೆ.
ಸೈಯೀದಾ ಅನೀಸ್ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡಬಳ್ಳಾಪುರ
ಕುಸಿಯುತ್ತಿದೆ ದಾಖಲಾತಿ
ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿಯುತ್ತಿದೆ. ಶಾಲಾ ಕಟ್ಟಡ ಸೂಕ್ತ ಆಟದ ಮೈದಾನ ಶೌಚಾಲಯ ಶಿಕ್ಷಕರ ಕೊರತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೆ ಪೋಷಕರು ಸರ್ಕಾರಿ ಶಾಲೆಗಳತ್ತ ಬಾರದೆ ಖಾಸಗಿ ಶಾಲೆಗಳತ್ತ ಹೋಗುವಂತೆ ಸರ್ಕಾರವೇ ಪರೋಕ್ಷವಾಗಿ ಮಾಡುತ್ತಿದೆ. ಆರ್.ಟಿ.ಇ ನೀತಿಯನ್ನು ಜಾರಿಗೆ ತರುವ ಮೂಲಕ ಸರ್ಕಾರಿ ಶಾಲಾ ಮಕ್ಕಳು ಖಾಸಗಿ ಶಾಲೆಗಳಿಗೆ ಹೋಗುವಂತೆ ಮಾಡಿದ್ದ ನಂತರ ಈಗ ಸೂಕ್ತ ಮೂಲ ಸೌಕರ್ಯಗಳನ್ನು ಕಲ್ಪಿಸದೇ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎನ್ನುತ್ತಾರೆ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ.