ದೊಡ್ಡಬಳ್ಳಾಪುರ:ಎರಡು ದಶಕದ ನಂತರ ನಮ್ಮೂರಿನ ಕೆರೆ ಕೋಡಿ ಬಿದ್ದಿದ್ದಕ್ಕೆ ಸಂತಸ ಪಟ್ಟಿದ್ದೆವು. ಆದರೆ, ಈ ಸಂತಸ ಹೆಚ್ಚು ದಿನಗಳ ಕಾಲ ಉಳಿಯಲಿಲ್ಲ. ದೊಡ್ಡಬಳ್ಳಾಪುರ ನಗರಸಭೆಯ ಒಳಚರಂಡಿ ನೀರು ಕೆರೆಗೆ ಹರಿದ ಪರಿಣಾಮ ಕೆರೆಯ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ ಎಂದು ದೊಡ್ಡತುಮಕೂರು ಗ್ರಾಮದ ರೈತ ವಸಂತ್ಕುಮಾರ್ ದೂರಿದ್ದಾರೆ.