<p><strong>ದೇವನಹಳ್ಳಿ:</strong> ಸರ್ಕಾರ ಭರವಸೆ ನೀಡಿದಂತೆ ನ.27ರಂದು ಸಚಿವ ಸಂಪುಟ ಸಭೆಯಲ್ಲಿ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ರದ್ದು ಪಡಿಸಬೇಕು. ಇಲ್ಲದಿದ್ದರೇ ಸರ್ಕಾರವೇ ರೈತರಿಗೆ ದ್ರೋಹ ಬಗೆದಂತೆ ಎಂದು ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಮುಖಂಡ ಕಾರಹಳ್ಳಿ ಶ್ರೀನಿವಾಸ್ ಹೇಳಿದರು.</p>.<p>ರೈತರ ಹೋರಾಟ 1,331ನೇ ದಿನಕ್ಕೆ ತಲುಪಿದೆ. ರಾಜ್ಯ ಸರ್ಕಾರವೂ ಭೂ ಸ್ವಾಧೀನ ಪ್ರಕ್ರಿಯೆ ರದ್ದುಪಡಿಸುವುದಾಗಿ ನಾಲ್ಕು ತಿಂಗಳ ಹಿಂದೆ ಘೋಷಿಸಿದ್ದರೂ ಅದು ಆದೇಶವಾಗಿ ಹೊರಬಂದಿಲ್ಲ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಎಂದು ಆಕ್ರೋಶ ಹೊರಹಾಕಿದರು.</p>.<p>ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸಂಯುಕ್ತ ಕರ್ನಾಟಕದ ವಿವಿಧ ಸಂಘಟನೆಗಳ ಜೊತೆಗೂಡಿ ನ.26ರಂದು ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಜ್ಯ ಸರ್ಕಾರ ನ.27ರ ಸಚಿವ ಸಂಪುಟದಲ್ಲಿ ರೈತರ ಪರ ನಿರ್ಧಾರ ಕೈಗೊಳ್ಳದಿದ್ದಾರೆ ಅಹೋರಾತ್ರಿ ಧರಣಿ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ವಿಧಾನಸೌಧದಲ್ಲಿ ರೈತರೊಂದಿಗೆ 1,198ನೇ ಹೋರಾಟದ ದಿನದಂದು ನಡೆದ ಸಭೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ರದ್ದು ಮಾಡುವುದಾಗಿ ಘೋಷಣೆ ಮಾಡಿ 133 ದಿನಗಳು ಕಳೆದರೂ ರೈತಪರ ನಿಲುವು ಹೊರಬಂದಿಲ್ಲ. ಈ ಧೋರಣೆ ಸಹಿಸಲು ಸಾಧ್ಯವಿಲ್ಲ ಎಂದರು.</p>.<p>ರಾಜ್ಯ ಸರ್ಕಾರವೂ ನುಡಿದಂತೆ ನಡೆಯಬೇಕು. ಮಾಧ್ಯಮಗಳಲ್ಲಿ ರೈತಪರವಾಗಿ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಪ್ರಚಾರ ಮಾಡಿರುವುದನ್ನು ಸರ್ಕಾರ ಆದೇಶದ ರೂಪದಲ್ಲಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.</p>.<p>ವೇಳೆ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಗೋಪಿ, ನಲ್ಲಪನಹಳ್ಳಿ ನಂಜಪ್ಪ, ತಿಮ್ಮರಾಯಪ್ಪ ಸೇರಿದಂತೆ ಮುಖಂಡರು, ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಸರ್ಕಾರ ಭರವಸೆ ನೀಡಿದಂತೆ ನ.27ರಂದು ಸಚಿವ ಸಂಪುಟ ಸಭೆಯಲ್ಲಿ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ರದ್ದು ಪಡಿಸಬೇಕು. ಇಲ್ಲದಿದ್ದರೇ ಸರ್ಕಾರವೇ ರೈತರಿಗೆ ದ್ರೋಹ ಬಗೆದಂತೆ ಎಂದು ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಮುಖಂಡ ಕಾರಹಳ್ಳಿ ಶ್ರೀನಿವಾಸ್ ಹೇಳಿದರು.</p>.<p>ರೈತರ ಹೋರಾಟ 1,331ನೇ ದಿನಕ್ಕೆ ತಲುಪಿದೆ. ರಾಜ್ಯ ಸರ್ಕಾರವೂ ಭೂ ಸ್ವಾಧೀನ ಪ್ರಕ್ರಿಯೆ ರದ್ದುಪಡಿಸುವುದಾಗಿ ನಾಲ್ಕು ತಿಂಗಳ ಹಿಂದೆ ಘೋಷಿಸಿದ್ದರೂ ಅದು ಆದೇಶವಾಗಿ ಹೊರಬಂದಿಲ್ಲ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಎಂದು ಆಕ್ರೋಶ ಹೊರಹಾಕಿದರು.</p>.<p>ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸಂಯುಕ್ತ ಕರ್ನಾಟಕದ ವಿವಿಧ ಸಂಘಟನೆಗಳ ಜೊತೆಗೂಡಿ ನ.26ರಂದು ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಜ್ಯ ಸರ್ಕಾರ ನ.27ರ ಸಚಿವ ಸಂಪುಟದಲ್ಲಿ ರೈತರ ಪರ ನಿರ್ಧಾರ ಕೈಗೊಳ್ಳದಿದ್ದಾರೆ ಅಹೋರಾತ್ರಿ ಧರಣಿ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ವಿಧಾನಸೌಧದಲ್ಲಿ ರೈತರೊಂದಿಗೆ 1,198ನೇ ಹೋರಾಟದ ದಿನದಂದು ನಡೆದ ಸಭೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ರದ್ದು ಮಾಡುವುದಾಗಿ ಘೋಷಣೆ ಮಾಡಿ 133 ದಿನಗಳು ಕಳೆದರೂ ರೈತಪರ ನಿಲುವು ಹೊರಬಂದಿಲ್ಲ. ಈ ಧೋರಣೆ ಸಹಿಸಲು ಸಾಧ್ಯವಿಲ್ಲ ಎಂದರು.</p>.<p>ರಾಜ್ಯ ಸರ್ಕಾರವೂ ನುಡಿದಂತೆ ನಡೆಯಬೇಕು. ಮಾಧ್ಯಮಗಳಲ್ಲಿ ರೈತಪರವಾಗಿ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಪ್ರಚಾರ ಮಾಡಿರುವುದನ್ನು ಸರ್ಕಾರ ಆದೇಶದ ರೂಪದಲ್ಲಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.</p>.<p>ವೇಳೆ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಗೋಪಿ, ನಲ್ಲಪನಹಳ್ಳಿ ನಂಜಪ್ಪ, ತಿಮ್ಮರಾಯಪ್ಪ ಸೇರಿದಂತೆ ಮುಖಂಡರು, ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>