<p><strong>ದೇವನಹಳ್ಳಿ (ಬೆಂ. ಗ್ರಾಮಾಂತರ):</strong> ಸಾವಿರ ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಗುರುವಾರ ವಿಕೋಪಕ್ಕೆ ತಿರುಗಿದೆ.</p><p>ಪ್ರತಿಭಟನಾ ಸ್ಥಳದಲ್ಲಿ ತಯಾರಿಸಿದ ಅನ್ನಕ್ಕೆ (ಬಾತ್) ವಿಷ ಬೆರೆಸಿ ಸೇವಿಸಿದ ರೈತರೊಬ್ಬರು ಅಸ್ವಸ್ಥಗೊಂಡಿದ್ದಾರೆ. </p><p>ಅಸ್ವಸ್ಥಗೊಂಡ ರೈತ ವೆಂಕಟೇಶ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.<br>ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ವಾರದೊಳಗೆ ಅಂತಿಮ ನಿರ್ಧಾರ ಪ್ರಕಟಿಸುವ ಭರವಸೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೋರಾಟ ಕೈ ಬಿಡುವಂತೆ ರೈತರಿಗೆ ಮನವಿ ಮಾಡಿದ್ದರು.</p><p>ಆದರೆ, ಕೆಐಎಡಿಬಿ ಈಚೆಗೆ ಹೊರಡಿಸಿದ್ದ ಭೂ ಸ್ವಾಧೀನ ಶಿಫಾರಸು ಪತ್ರ ಎಲ್ಲೆಡೆ ಸಂಚಲನ ಮೂಡಿಸಿತ್ತು. ಇದರಿಂದ ಸಿಡಿಮಿಡಿಗೊಂಡ ರೈತರು ಮತ್ತು ಹೋರಾಟಗಾರರು ಏಪ್ರಿಲ್ 10 ರಂದು ಸಚಿವ ಮುನಿಯಪ್ಪ ಅವರ ಮನೆಗೆ ತೆರಳಿ ಚರ್ಚಿಸಲು ನಿರ್ಧಾರ ಮಾಡಿದ್ದರು. <br>ಅದರಂತೆ ಗುರುವಾರ ಬೆಳಗ್ಗೆ ಚನ್ನರಾಯಪಟ್ಟಣ ಹೋಬಳಿ ರೈತರು ಮತ್ತು ಹೋರಾಟಗಾರರು ಸಚಿವರ ಭೇಟಿಗಾಗಿ ಬೆಂಗಳೂರಿನತ್ತ ಹೊರಟಿದ್ದರು. </p><p>ಈ ವೇಳೆ ಪೊಲೀಸರು ತಾಲ್ಲೂಕಿನ ವಿವಿಧೆಡೆ ರೈತ ಹೋರಾಟಗಾರರನ್ನು ತಡೆದರು. ಇದರಿಂದ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಚಕಮಕಿ ವಾಗ್ವಾದಕ್ಕೆ ತಿರುಗಿ ರೈತರು ಪ್ರತಿಭಟನೆ ಆರಂಭಿಸಿದರು.</p><p>'ಸಚಿವರ ಭೇಟಿಗೆ ಹೊರಟಿದ್ದ ರೈತರನ್ನು ತಡೆದು ಪೊಲೀಸರು ದರ್ಪ ತೋರುತ್ತಿದ್ದಾರೆ. ಕೆಲವು ರೈತ ಮುಖಂಡರನ್ನು ಗೃಹ ಬಂಧನದಲ್ಲಿ ಇಟ್ಟು ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ' ಎಂದು ರೈತರು ಆರೋಪಿಸಿದರು.</p><p>ಧರಣಿ ಸ್ಥಳದಲ್ಲೇ ಅನ್ನ (ಬಾತ್) ತಯಾರಿಸಿದ ರೈತರು ಅದರಲ್ಲಿ ವಿಷ ಬೆರೆಸಿ ಸೇವಿಸಲು ಮುಂದಾದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಅನ್ನದ ಪಾತ್ರೆ ಕಿತ್ತು ಬಿಸಾಡಿದರು. ಇದರಿಂದ ರೈತರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆಯಿತು. ಈ ನಡುವೆ ವೆಂಕಟೇಶ ಎಂಬ ರೈತರೊಬ್ಬರು ವಿಷ ಬೆರೆಸಿದ ಅನ್ನ ಸೇವಿಸಿದರು.</p><p>ಇದರೊಂದಿಗೆ 1080 ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿದ ಭೂಸ್ವಾಧೀನ ವಿರೋಧಿ ಹೋರಾಟ ಉಗ್ರ ಸ್ವರೂಪ ತಾಳಿದೆ.</p><p>ಚನ್ನರಾಯಪಟ್ಟಣದ 13 ಹಳ್ಳಿಗಳಲ್ಲಿ 1,777 ಎಕರೆ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳುವುದನ್ನು ವಿರೋಧಿಸಿ 1080 ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ (ಬೆಂ. ಗ್ರಾಮಾಂತರ):</strong> ಸಾವಿರ ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಗುರುವಾರ ವಿಕೋಪಕ್ಕೆ ತಿರುಗಿದೆ.</p><p>ಪ್ರತಿಭಟನಾ ಸ್ಥಳದಲ್ಲಿ ತಯಾರಿಸಿದ ಅನ್ನಕ್ಕೆ (ಬಾತ್) ವಿಷ ಬೆರೆಸಿ ಸೇವಿಸಿದ ರೈತರೊಬ್ಬರು ಅಸ್ವಸ್ಥಗೊಂಡಿದ್ದಾರೆ. </p><p>ಅಸ್ವಸ್ಥಗೊಂಡ ರೈತ ವೆಂಕಟೇಶ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.<br>ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ವಾರದೊಳಗೆ ಅಂತಿಮ ನಿರ್ಧಾರ ಪ್ರಕಟಿಸುವ ಭರವಸೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೋರಾಟ ಕೈ ಬಿಡುವಂತೆ ರೈತರಿಗೆ ಮನವಿ ಮಾಡಿದ್ದರು.</p><p>ಆದರೆ, ಕೆಐಎಡಿಬಿ ಈಚೆಗೆ ಹೊರಡಿಸಿದ್ದ ಭೂ ಸ್ವಾಧೀನ ಶಿಫಾರಸು ಪತ್ರ ಎಲ್ಲೆಡೆ ಸಂಚಲನ ಮೂಡಿಸಿತ್ತು. ಇದರಿಂದ ಸಿಡಿಮಿಡಿಗೊಂಡ ರೈತರು ಮತ್ತು ಹೋರಾಟಗಾರರು ಏಪ್ರಿಲ್ 10 ರಂದು ಸಚಿವ ಮುನಿಯಪ್ಪ ಅವರ ಮನೆಗೆ ತೆರಳಿ ಚರ್ಚಿಸಲು ನಿರ್ಧಾರ ಮಾಡಿದ್ದರು. <br>ಅದರಂತೆ ಗುರುವಾರ ಬೆಳಗ್ಗೆ ಚನ್ನರಾಯಪಟ್ಟಣ ಹೋಬಳಿ ರೈತರು ಮತ್ತು ಹೋರಾಟಗಾರರು ಸಚಿವರ ಭೇಟಿಗಾಗಿ ಬೆಂಗಳೂರಿನತ್ತ ಹೊರಟಿದ್ದರು. </p><p>ಈ ವೇಳೆ ಪೊಲೀಸರು ತಾಲ್ಲೂಕಿನ ವಿವಿಧೆಡೆ ರೈತ ಹೋರಾಟಗಾರರನ್ನು ತಡೆದರು. ಇದರಿಂದ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಚಕಮಕಿ ವಾಗ್ವಾದಕ್ಕೆ ತಿರುಗಿ ರೈತರು ಪ್ರತಿಭಟನೆ ಆರಂಭಿಸಿದರು.</p><p>'ಸಚಿವರ ಭೇಟಿಗೆ ಹೊರಟಿದ್ದ ರೈತರನ್ನು ತಡೆದು ಪೊಲೀಸರು ದರ್ಪ ತೋರುತ್ತಿದ್ದಾರೆ. ಕೆಲವು ರೈತ ಮುಖಂಡರನ್ನು ಗೃಹ ಬಂಧನದಲ್ಲಿ ಇಟ್ಟು ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ' ಎಂದು ರೈತರು ಆರೋಪಿಸಿದರು.</p><p>ಧರಣಿ ಸ್ಥಳದಲ್ಲೇ ಅನ್ನ (ಬಾತ್) ತಯಾರಿಸಿದ ರೈತರು ಅದರಲ್ಲಿ ವಿಷ ಬೆರೆಸಿ ಸೇವಿಸಲು ಮುಂದಾದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಅನ್ನದ ಪಾತ್ರೆ ಕಿತ್ತು ಬಿಸಾಡಿದರು. ಇದರಿಂದ ರೈತರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆಯಿತು. ಈ ನಡುವೆ ವೆಂಕಟೇಶ ಎಂಬ ರೈತರೊಬ್ಬರು ವಿಷ ಬೆರೆಸಿದ ಅನ್ನ ಸೇವಿಸಿದರು.</p><p>ಇದರೊಂದಿಗೆ 1080 ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿದ ಭೂಸ್ವಾಧೀನ ವಿರೋಧಿ ಹೋರಾಟ ಉಗ್ರ ಸ್ವರೂಪ ತಾಳಿದೆ.</p><p>ಚನ್ನರಾಯಪಟ್ಟಣದ 13 ಹಳ್ಳಿಗಳಲ್ಲಿ 1,777 ಎಕರೆ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳುವುದನ್ನು ವಿರೋಧಿಸಿ 1080 ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>