<p><strong>ದೇವನಹಳ್ಳಿ:</strong> ಭೂಸ್ವಾಧೀನ ವಿರೋಧಿಸಿ ರೈತರು ಸಾವಿರಕ್ಕೂ ಹೆಚ್ಚು ದಿನಗಳಿಂದ ನಡೆಸುತ್ತಿರುವ ಧರಣಿ ಸ್ಥಳದಲ್ಲಿ ಸೋಮವಾರ ನಡೆದ ‘ಗ್ರಾಮ ಸಂಕಲ್ಪ ಸಮಾವೇಶ’ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾಯಿತು.</p>.<p>ಭೂಸ್ವಾಧೀನ ವಿರೋಧಿ ಹೋರಾಟ 1,197 ದಿನಕ್ಕೆ ಕಾಲಿಟ್ಟಿದ್ದು, ‘ಪ್ರಾಣ ಹೋದರೂ ಭೂಮಿ ಕೊಡುವುದಿಲ್ಲ’ ಎಂದು ರೈತರು ಘೋಷಿಸಿದರು. ಹೋರಾಟ ಅಂತಿಮ ಹಂತ ತಲುಪಿರುವಾಗ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ನಮ್ಮ ನಿರ್ಧಾರ ಅಚಲವಾಗಿದೆ ಎಂದು ಒಕ್ಕೊರಲಿನಿಂದ ಘೋಷಿಸಿದರು. </p>.<p>ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಹತ್ತು ದಿನಗಳಿಂದ ಈ ಭಾಗದಲ್ಲಿ ಗ್ರಾಮ ಸಭೆ ನಡೆಸಿದೆ. 13 ಹಳ್ಳಿಗಳ ಶೇ.73 ರಿಂದ ಶೇ.80ರಷ್ಟು ರೈತರು ಭೂಮಿ ಕೊಡುವುದಿಲ್ಲ ಎಂದು ಪ್ರತಿಭಟನಾ ಪತ್ರಕ್ಕೆ ಸಹಿ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಭೂಸ್ವಾಧೀನ ವಿರೋಧಿಸಿ ರೈತರು ಸಾವಿರಕ್ಕೂ ಹೆಚ್ಚು ದಿನಗಳಿಂದ ನಡೆಸುತ್ತಿರುವ ಧರಣಿ ಸ್ಥಳದಲ್ಲಿ ಸೋಮವಾರ ನಡೆದ ‘ಗ್ರಾಮ ಸಂಕಲ್ಪ ಸಮಾವೇಶ’ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾಯಿತು.</p>.<p>ಭೂಸ್ವಾಧೀನ ವಿರೋಧಿ ಹೋರಾಟ 1,197 ದಿನಕ್ಕೆ ಕಾಲಿಟ್ಟಿದ್ದು, ‘ಪ್ರಾಣ ಹೋದರೂ ಭೂಮಿ ಕೊಡುವುದಿಲ್ಲ’ ಎಂದು ರೈತರು ಘೋಷಿಸಿದರು. ಹೋರಾಟ ಅಂತಿಮ ಹಂತ ತಲುಪಿರುವಾಗ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ನಮ್ಮ ನಿರ್ಧಾರ ಅಚಲವಾಗಿದೆ ಎಂದು ಒಕ್ಕೊರಲಿನಿಂದ ಘೋಷಿಸಿದರು. </p>.<p>ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಹತ್ತು ದಿನಗಳಿಂದ ಈ ಭಾಗದಲ್ಲಿ ಗ್ರಾಮ ಸಭೆ ನಡೆಸಿದೆ. 13 ಹಳ್ಳಿಗಳ ಶೇ.73 ರಿಂದ ಶೇ.80ರಷ್ಟು ರೈತರು ಭೂಮಿ ಕೊಡುವುದಿಲ್ಲ ಎಂದು ಪ್ರತಿಭಟನಾ ಪತ್ರಕ್ಕೆ ಸಹಿ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>