<p><strong>ಹೊಸಕೋಟೆ</strong>: ಜಮೀನು ಪೋಡಿ ಅನಗತ್ಯ ವಿಳಂಬ ಮತ್ತು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಜಡೆಗೇನಹಳ್ಳಿ ಹೋಬಳಿ ನಾಡಕಚೇರಿ ಹೋಬಳಿ ಗ್ರಾಮ ಆಡಳಿತಾಧಿಕಾರಿ ಕೆ.ಮನೋಹರ್ ಅವರನ್ನು ಅಮಾನತು ಮಾಡಲಾಗಿದೆ. </p>.<p>ಇಲಾಖೆ ವಿಚಾರಣೆ ಕಾಯ್ದಿರಿಸಿ, ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಗರಡಗಲ್ಲು ಕಂದಾಯ ವೃತ್ತಕ್ಕೆ ವರ್ಗಾಯಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.</p>.<p>2022ರ ಡಿಸೆಂಬರ್ನಲ್ಲಿ ಖಾಜಿ ಹೊಸಹಳ್ಳಿ ಗ್ರಾಮದ ನಿವಾಸಿ ಹಾಗೂ ದಲಿತ ಸಂಘರ್ಷ ಸಮಿತಿ ಕರ್ನಾಟಕ ಬೆಂಗಳೂರು ವಿಭಾಗೀಯ ಸಂಚಾಲಕ ಮಂಜುನಾಥ್ ಅಣ್ಣಯ್ಯ ಪಿತ್ರಾರ್ಜಿತ ಆಸ್ತಿ ಪೋಡಿಗೆ ಅರ್ಜಿ ಸಲ್ಲಿಸಿದ್ದರು. </p>.<p>ಎರಡು ವರ್ಷ ಪೋಡಿ ಮಾಡದೆ ಅನಗತ್ಯ ವಿಳಂಬ ಮಾಡಿ ಮನೋಹರ್ ಸತಾಯಿಸಿದ್ದರು. ಭೂಮಾಪಕ ತಿಪ್ಪೇಸ್ವಾಮಿ, ಆರ್ಐ ಆನಂದ್ ಜೊತೆ ಸೇರಿ ₹3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಪೋನ್ ಪೇ ಮೂಲಕ ₹40 ಸಾವಿರ, ₹60 ಸಾವಿರ ಲಂಚ ಪಾವತಿಸಿದ್ದೆ. ಲಂಚ ಪಡೆದ ನಂತರ ಜಮೀನು ಸರ್ವೆಮಾಡಿ ಅನುಬಂಧ 1 ರಿಂದ 5 ಮಾಡಿದ್ದರು. ಪೋಡಿ ವಿಳಂಬ ಮಾಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಬಾಕಿ ಹಣಕೊಟ್ಟಿಲ್ಲವೆಂದು ಉಳಿದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಮಂಜುನಾಥ್ ಅಣ್ಣಯ್ಯ ದೂರು ನೀಡಿದ್ದರು. </p>.<p>ಭೂಮಾಪಕ ತಿಪ್ಪೇಸ್ವಾಮಿ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲು ಹಾಗೂ ತೆಗೆದುಕೊಂಡ ಕ್ರಮದ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡುವಂತೆ ಜಿಲ್ಲಾ ಭೂ ದಾಖಲೆಗಳ ಉಪ ನಿರ್ದೇಶಕರಿಗೆ ಸೂಚನೆಯನ್ನು ನೀಡಿದ್ದಾರೆ. ಇದು ನಮ್ಮ ಹೋರಾಟಕ್ಕೆ ಧಕ್ಕಿದ ಫಲವಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಎಸ್.ನಾರಾಯಣಸ್ವಾಮಿ, ಜಿಲ್ಲಾ ಸಂಚಾಲಕ ಲೋಕೇಶ್, ಸಂಘಟನಾ ಸಂಚಾಲಕ ಸಿ.ನಾರಾಯಣಸ್ವಾಮಿ, ಬೆಂಗಳೂರು ನಗರ ಸಂಘಟನಾ ಸಂಚಾಲಕ ಸುರೇಶ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ಜಮೀನು ಪೋಡಿ ಅನಗತ್ಯ ವಿಳಂಬ ಮತ್ತು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಜಡೆಗೇನಹಳ್ಳಿ ಹೋಬಳಿ ನಾಡಕಚೇರಿ ಹೋಬಳಿ ಗ್ರಾಮ ಆಡಳಿತಾಧಿಕಾರಿ ಕೆ.ಮನೋಹರ್ ಅವರನ್ನು ಅಮಾನತು ಮಾಡಲಾಗಿದೆ. </p>.<p>ಇಲಾಖೆ ವಿಚಾರಣೆ ಕಾಯ್ದಿರಿಸಿ, ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಗರಡಗಲ್ಲು ಕಂದಾಯ ವೃತ್ತಕ್ಕೆ ವರ್ಗಾಯಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.</p>.<p>2022ರ ಡಿಸೆಂಬರ್ನಲ್ಲಿ ಖಾಜಿ ಹೊಸಹಳ್ಳಿ ಗ್ರಾಮದ ನಿವಾಸಿ ಹಾಗೂ ದಲಿತ ಸಂಘರ್ಷ ಸಮಿತಿ ಕರ್ನಾಟಕ ಬೆಂಗಳೂರು ವಿಭಾಗೀಯ ಸಂಚಾಲಕ ಮಂಜುನಾಥ್ ಅಣ್ಣಯ್ಯ ಪಿತ್ರಾರ್ಜಿತ ಆಸ್ತಿ ಪೋಡಿಗೆ ಅರ್ಜಿ ಸಲ್ಲಿಸಿದ್ದರು. </p>.<p>ಎರಡು ವರ್ಷ ಪೋಡಿ ಮಾಡದೆ ಅನಗತ್ಯ ವಿಳಂಬ ಮಾಡಿ ಮನೋಹರ್ ಸತಾಯಿಸಿದ್ದರು. ಭೂಮಾಪಕ ತಿಪ್ಪೇಸ್ವಾಮಿ, ಆರ್ಐ ಆನಂದ್ ಜೊತೆ ಸೇರಿ ₹3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಪೋನ್ ಪೇ ಮೂಲಕ ₹40 ಸಾವಿರ, ₹60 ಸಾವಿರ ಲಂಚ ಪಾವತಿಸಿದ್ದೆ. ಲಂಚ ಪಡೆದ ನಂತರ ಜಮೀನು ಸರ್ವೆಮಾಡಿ ಅನುಬಂಧ 1 ರಿಂದ 5 ಮಾಡಿದ್ದರು. ಪೋಡಿ ವಿಳಂಬ ಮಾಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಬಾಕಿ ಹಣಕೊಟ್ಟಿಲ್ಲವೆಂದು ಉಳಿದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಮಂಜುನಾಥ್ ಅಣ್ಣಯ್ಯ ದೂರು ನೀಡಿದ್ದರು. </p>.<p>ಭೂಮಾಪಕ ತಿಪ್ಪೇಸ್ವಾಮಿ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲು ಹಾಗೂ ತೆಗೆದುಕೊಂಡ ಕ್ರಮದ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡುವಂತೆ ಜಿಲ್ಲಾ ಭೂ ದಾಖಲೆಗಳ ಉಪ ನಿರ್ದೇಶಕರಿಗೆ ಸೂಚನೆಯನ್ನು ನೀಡಿದ್ದಾರೆ. ಇದು ನಮ್ಮ ಹೋರಾಟಕ್ಕೆ ಧಕ್ಕಿದ ಫಲವಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಎಸ್.ನಾರಾಯಣಸ್ವಾಮಿ, ಜಿಲ್ಲಾ ಸಂಚಾಲಕ ಲೋಕೇಶ್, ಸಂಘಟನಾ ಸಂಚಾಲಕ ಸಿ.ನಾರಾಯಣಸ್ವಾಮಿ, ಬೆಂಗಳೂರು ನಗರ ಸಂಘಟನಾ ಸಂಚಾಲಕ ಸುರೇಶ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>