ವಿಜಯಪುರ:ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಸರ್ಕಾರದಿಂದ ಸರ್ವೆ ನಂಬರ್ 69ರಲ್ಲಿ ಮಂಜೂರು ಮಾಡಿರುವ ಭೂಮಿ ಬಳಕೆಗೆ ಯೋಗ್ಯವಾಗಿಲ್ಲ. ಹಾಗಾಗಿ, ಕಂದಾಯ ಇಲಾಖೆ ಅಧಿಕಾರಿಗಳು ಇದೇ ಸರ್ವೆ ನಂಬರ್ನಲ್ಲಿ ಇರುವ ಬೇರೆ ಭೂಮಿಯನ್ನು ಮಂಜೂರು ಮಾಡಬೇಕು. ಈ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರ ಗಮನಕ್ಕೆ ತರಲಾಗುವುದು ಎಂದು ಮುಖಂಡ ಭೈರೇಗೌಡ ತಿಳಿಸಿದರು.