ತಾಲ್ಲೂಕಿನ ಉಜ್ಜನಿ ಗ್ರಾಮದ ಸರ್ವೆ ನಂ. 27ರ ಗೋಮಾಳ ಜಾಗವನ್ನು ಜಾನುವಾರು ಮೇಯಿಸಲು ಸರ್ಕಾರ ಮೀಸಲಿಟ್ಟಿದೆ. ಆದರೆ, ಈ ಗೋಮಾಳವನ್ನು ಗ್ರಾಮದ ಕೆಲವರು ಒತ್ತುವರಿ ಮಾಡಿಕೊಂಡು ಕೃಷಿ ಜಮೀನಾಗಿ ಪರಿವರ್ತಿಸುವ ಮೂಲಕ ಜಾನುವಾರು ಮೇಯಿಸಲು ಸ್ಥಳದ ಕೊರತೆ ಉಂಟು ಮಾಡುತ್ತಿದ್ದಾರೆ ಎಂದು ನವೀನ್ ಯಾದವ್ ಎನ್ನುವ ಯುವಕ ಜು. 22ರಂದು ತನ್ನ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದ.