‘ಕುವೆಂಪು, ಮಾಸ್ತಿ, ಬೇಂದ್ರೆ, ಕಾರಂತ, ಅನಂತಮೂರ್ತಿ, ಕಾರ್ನಾಡ್, ಚಂದ್ರಶೇಖರ ಕಂಬಾರ ಅವರ ತನಕ 8 ಜ್ಞಾನಪೀಠ ಪ್ರಶಸ್ತಿಗಳು ಕನ್ನಡ ಸಾಹಿತ್ಯಕ್ಕೆ ಸಂದಿವೆ. ಯಾವುದೇ ವಿಷಯವನ್ನು ಸಮರ್ಥವಾಗಿ ಅಭ್ಯವ್ಯಕ್ತಿಪಡಿಸಬಲ್ಲಷ್ಟು ಶಬ್ಧ ಭಂಡಾರವನ್ನು ಕನ್ನಡ ಭಾಷೆ ಹೊಂದಿದೆ. ಇಂಗ್ಲಿಷ್, ಹಿಂದಿ ಭಾಷೆಯ ಪ್ರಭಾವದ ನಡುವೆಯೂ ಕನ್ನಡ ಭಾಷೆ ಗಟ್ಟಿಯಾಗಿ ಬೆಳೆದು ನಿಂತಿದೆ. ಯಾವುದೇ ಭಾಷೆ ಉಳಿಯುವುದು, ಬೆಳೆಯುವುದು ಅಲ್ಲಿನ ಜನರು ಬಳಸುವುದರ ಮೇಲೆ ನಿರ್ಧರಿಸಲ್ಪಡುತ್ತದೆ’ ಎಂದರು.