ಹಿರಿಯ ವಕೀಲರಾದ ಎಂ.ಕೃಷ್ಣಮೂರ್ತಿ, ಬಿ.ಎಸ್.ಮಲ್ಲಿಕಾರ್ಜುನ್ ಮಾತನಾಡಿ, ನ್ಯಾಯಾಲಯದ ಆವರಣದಲ್ಲೇ ವಕೀಲರ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಖಂಡನೀಯ. ವಕೀಲರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ನ್ಯಾಯಾಲಯದಲ್ಲಿ ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದರು.