<p><strong>ದೊಡ್ಡಬಳ್ಳಾಪುರ:</strong> ಬೆಂಗಳೂರಿನ ಕೌಟಂಬಿಕ ನ್ಯಾಯಾಲಯದಲ್ಲಿ ವಕೀಲರಾದ ಮುನಿರೆಡ್ಡಿ ಅವರ ಮೇಲೆ ಕಕ್ಷಿದಾರರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಶುಕ್ರವಾರ ನಗರದ ವಕೀಲರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಪ್ರತಿಭಟಿಸಿದರು.</p>.<p>ಹಿರಿಯ ವಕೀಲರಾದ ಎಂ.ಕೃಷ್ಣಮೂರ್ತಿ, ಬಿ.ಎಸ್.ಮಲ್ಲಿಕಾರ್ಜುನ್ ಮಾತನಾಡಿ, ನ್ಯಾಯಾಲಯದ ಆವರಣದಲ್ಲೇ ವಕೀಲರ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಖಂಡನೀಯ. ವಕೀಲರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ನ್ಯಾಯಾಲಯದಲ್ಲಿ ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದರು.</p>.<p>ರಾಜ್ಯ ವಕೀಲರ ಪರಿಷತ್ ಕರೆ ನೀಡಿರುವಂತೆ ಶನಿವಾರ ಎಲ್ಲ ವಕೀಲರು ಕೈಗಳಿಗೆ ಕೆಂಪು ಪಟ್ಟಿ ಧರಿಸಿ ನ್ಯಾಯಾಲಯದ ಕಲಾಪದಲ್ಲಿ ಭಾಗವಹಿಸಲಾಗುವುದು ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರಾ.ಬೈರೇಗೌಡ ಹಾಗೂ ವಕೀಲರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ಬೆಂಗಳೂರಿನ ಕೌಟಂಬಿಕ ನ್ಯಾಯಾಲಯದಲ್ಲಿ ವಕೀಲರಾದ ಮುನಿರೆಡ್ಡಿ ಅವರ ಮೇಲೆ ಕಕ್ಷಿದಾರರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಶುಕ್ರವಾರ ನಗರದ ವಕೀಲರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಪ್ರತಿಭಟಿಸಿದರು.</p>.<p>ಹಿರಿಯ ವಕೀಲರಾದ ಎಂ.ಕೃಷ್ಣಮೂರ್ತಿ, ಬಿ.ಎಸ್.ಮಲ್ಲಿಕಾರ್ಜುನ್ ಮಾತನಾಡಿ, ನ್ಯಾಯಾಲಯದ ಆವರಣದಲ್ಲೇ ವಕೀಲರ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಖಂಡನೀಯ. ವಕೀಲರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ನ್ಯಾಯಾಲಯದಲ್ಲಿ ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದರು.</p>.<p>ರಾಜ್ಯ ವಕೀಲರ ಪರಿಷತ್ ಕರೆ ನೀಡಿರುವಂತೆ ಶನಿವಾರ ಎಲ್ಲ ವಕೀಲರು ಕೈಗಳಿಗೆ ಕೆಂಪು ಪಟ್ಟಿ ಧರಿಸಿ ನ್ಯಾಯಾಲಯದ ಕಲಾಪದಲ್ಲಿ ಭಾಗವಹಿಸಲಾಗುವುದು ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರಾ.ಬೈರೇಗೌಡ ಹಾಗೂ ವಕೀಲರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>