ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಬಿಜೆಪಿ ನಗರ ಘಟಕದ ಅಧ್ಯಕ್ಷ ಎಚ್.ಎಸ್.ಶಿವಶಂಕರ್, ಜಿಲ್ಲಾ ವಕ್ತಾರರಾದ ಪುಷ್ಪಾ ಶಿವಶಂಕರ್, ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿರುವುದು ಸಂತೋಷದ ವಿಷಯ. ಆದರೆ, ಈ ಕಾಮಗಾರಿ ಉದ್ಘಾಟನೆಗೆ ಶಿಷ್ಟಾಚಾರದಂತೆ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದರು.