ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಎಂ.ಟಿ.ಬಿ. ನಾಗರಾಜ್‌ರಿಂದ ನಿಂಬು ಡ್ಯಾನ್ಸ್

Last Updated 23 ಏಪ್ರಿಲ್ 2019, 13:27 IST
ಅಕ್ಷರ ಗಾತ್ರ

ಹೊಸಕೋಟೆ: ಈಚೆಗೆ ಚುನಾವಣಾ ಪ್ರಚಾರದ ಸಮಯದಲ್ಲಿ ನಾಗಿಣಿ ನೃತ್ಯಮಾಡಿ ಸುದ್ದಿಯಾಗಿದ್ದ ವಸತಿ ಸಚಿವ ಎಂ.ಟಿ.ಬಿ. ನಾಗರಾಜ್ ಚುನಾವಣೆ ಮುಗಿದಮೇಲೆ ಗರುಡಾಚಾರ್ಯಪಾಳ್ಯದಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಆನೆಯ ಮೇಲೆ ಶ್ರೀರಾಮನ ಮೂರ್ತಿಯನ್ನು ಇಟ್ಟು ಭಾರಿ ಮೆರವಣಿಗೆ ಮಾಡಲಾಯಿತು. ಸಚಿವರು ಆನೆಗೆ ಬಾಳೆಹಣ್ಣು ತಿನ್ನಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆನಂತರ ಸಾರ್ವಜನಿಕರೊಂದಿಗೆ ಸೇರಿ ನಿಂಬು ನೃತ್ಯ ಮಾಡಿದರು.

ಸುಮಾರು 15 ನಿಮಿಷಕ್ಕೂ ಹೆಚ್ಚು ಸಮಯ ಸಚಿವರು ಕುಣಿದರು. ಅವರ ಆರೋಗ್ಯದ ಬಗ್ಗೆ ಮಾತನಾಡುತ್ತಿದ್ದ ವಿರೋಧಿಗಳಿಗೆ ಅರೋಗ್ಯ ಚೆನ್ನಾಗಿರುವುದನ್ನು ದೃಢಪಡಿಸಿದ್ದಾರೆ ಎಂದು ಅಭಿಮಾನಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT