ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ದಾಳಿ: 4 ಕುರಿ ಬಲಿ

Last Updated 6 ಏಪ್ರಿಲ್ 2021, 2:45 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ಬೆಟ್ಟದ ತಪ್ಪಲಿನ ಗ್ರಾಮಸ್ಥರು ಕಳೆದ ಹಲವು ತಿಂಗಳಿನಿಂದ ಚಿರತೆ ಆತಂಕದಿಂದ ಬಸವಳಿದಿದ್ದಾರೆ.

ಭಾನುವಾರ ರಾತ್ರಿ ಸೊಣ್ಣೇನಹಳ್ಳಿ ಗ್ರಾಮಕ್ಕೆ ನುಗ್ಗಿರುವ ಚಿರತೆ, ರೈತ ಚೆನ್ನರಾಯಪ್ಪ ಮನೆಯ ಪಕ್ಕದಲ್ಲಿ ನಿರ್ಮಿಸಿರುವ ಕೊಟ್ಟಿಗೆಯಲ್ಲಿದ್ದ 4 ಕುರಿಯನ್ನು ಕೊಂದು ಹಾಕಿದೆ. ಅಲ್ಲದೆ 8 ಕುರಿಗಳ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ.

ಕುರಿಗಳ ಶಬ್ದಕ್ಕೆ ರೈತ ಚೆನ್ನರಾಯಪ್ಪ ಹಾಗೂ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ತೆರಳಿದಾಗ, ಚಿರತೆ ಸ್ಥಳದಿಂದ ಪರಾರಿಯಾಗಿದೆ. ಚಿರತೆ ಸೆರೆಹಿಡಿಯಲು ಮುಂದಾಗದ ಅರಣ್ಯ ಇಲಾಖೆ ನಡೆಯಿಂದಾಗಿ ಸಾಕು ಪ್ರಾಣಿಗಳಾದ ಹಸು, ಕುರಿ, ಮೇಕೆ, ನಾಯಿ, ಕೋಳಿಯಂತ ಪ್ರಾಣಿಗಳನ್ನು ಚಿರತೆ ಬಲಿಪಡೆಯುತ್ತಿರುವ ಘಟನೆ ಪದೇ ಪದೇ ನಡೆಯುತ್ತಿದ್ದರು, ರೈತರು ಅಸಹಾಯಕರಾಗಿ ನಷ್ಟವನ್ನು ಅನುಭವಿಸುವಂತಾಗಿದೆ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT