<p><strong>ಆನೇಕಲ್ :</strong> ತಾಲ್ಲೂಕಿನ ಜಿಗಣಿ ಸಮೀಪದ ಕ್ಯಾಲಸನಹಳ್ಳಿ ಸಮೀಪದ ಉಪ್ಕಾರ್ ಅರ್ಬರ್ಸ್ ಬಡಾವಣೆಯಲ್ಲಿ ಭಾನುವಾರ ಬೆಳಗಿನ ಜಾವ 3ಗಂಟೆಯ ಸುಮಾರಿನಲ್ಲಿ ಚಿರತೆ ಓಡಾಡಿರುವ ದೃಶ್ಯಗಳು ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಡಾವಣೆಯ ನಿವಾಸಿಗಳು ಆತಂಕಗೊಂಡಿದ್ದಾರೆ.</p>.<p>ಚಿರತೆಯ ಓಡಾಟದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ನಂತರ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಚಿರತೆಯ ಮಾಹಿತಿ ಕಲೆ ಹಾಕಿದ್ದಾರೆ.</p>.<p>ಕ್ಯಾಲಸನಹಳ್ಳಿ ರಸ್ತೆಯ ಮೂಲಕವೇ ಜಿಗಣಿ, ಬೊಮ್ಮಸಂದ್ರ ಕೈಗಾರಿಕ ಪ್ರದೇಶಕ್ಕೆ ನೂರಾರು ಮಂದಿ ಕಾರ್ಮಿಕರು ವಿವಿಧ ಪಾಳಿಗಳಲ್ಲಿ ರಾತ್ರಿಯಿಡೀ ಓಡಾಟ ಮಾಡುತ್ತಾರೆ. ಚಿರತೆ ಕಂಡಿರುವುದರಿಂದ ಬಡಾವಣೆ ಮತ್ತು ಸುತ್ತಮುತ್ತಲ ಗ್ರಾಮಗಳ ಜನರು ಭಯಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಯ ಸಿಬ್ಬಂದಿ ಕ್ರಮ ಕೈಗೊಂಡು ಚಿರತೆಯನ್ನು ಪತ್ತೆ ಮಾಡಿ ಸೆರೆ ಹಿಡಿಯಬೇಕು ಎಂದು ಸ್ಥಳೀಯ ಅಣ್ಣಯ್ಯಪ್ಪ ಒತ್ತಾಯಿಸಿದರು.</p>.<p>ಅರಣ್ಯ ಇಲಾಖೆಯಿಂದ ಗಸ್ತು ಹೆಚ್ಚಿಸಲಾಗುವುದು. ಜತೆಗೆ ಸಾರ್ಜನಿಕರೂ ಎಚ್ಚರಿಕೆ ವಹಿಸಬೇಕು. ರಾತ್ರಿ ಮತ್ತು ಮುಂಜನಾನೆಯ ಸಂದರ್ಭದ ಓಡಾಟ ನಿಲ್ಲಿಸಬೇಕು ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ಸಲಹೆ ನೀಡಿದರು.</p>.<p>ಚಿರತೆಯ ಚಲನವಲನ ಮತ್ತು ಹೆಜ್ಜೆ ಗುರುತು ಗುರುತಿಸಲಾಗಿದೆ. ಚಿರತೆ ಓಡಾಡಿರುವ ಜಾಗವನ್ನು ಪರಿಶೀಲಿಸಲಾಗಿದ್ದು, ಭಾನುವಾರ ರಾತ್ರಿ ಚಿರತೆ ಓಡಾಟ ಕಂಡು ಬಂದಲ್ಲಿ ಬೋನಿಟ್ಟು ಸೆರೆ ಹಿಡಿಯಲಾಗುವುದು ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್ :</strong> ತಾಲ್ಲೂಕಿನ ಜಿಗಣಿ ಸಮೀಪದ ಕ್ಯಾಲಸನಹಳ್ಳಿ ಸಮೀಪದ ಉಪ್ಕಾರ್ ಅರ್ಬರ್ಸ್ ಬಡಾವಣೆಯಲ್ಲಿ ಭಾನುವಾರ ಬೆಳಗಿನ ಜಾವ 3ಗಂಟೆಯ ಸುಮಾರಿನಲ್ಲಿ ಚಿರತೆ ಓಡಾಡಿರುವ ದೃಶ್ಯಗಳು ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಡಾವಣೆಯ ನಿವಾಸಿಗಳು ಆತಂಕಗೊಂಡಿದ್ದಾರೆ.</p>.<p>ಚಿರತೆಯ ಓಡಾಟದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ನಂತರ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಚಿರತೆಯ ಮಾಹಿತಿ ಕಲೆ ಹಾಕಿದ್ದಾರೆ.</p>.<p>ಕ್ಯಾಲಸನಹಳ್ಳಿ ರಸ್ತೆಯ ಮೂಲಕವೇ ಜಿಗಣಿ, ಬೊಮ್ಮಸಂದ್ರ ಕೈಗಾರಿಕ ಪ್ರದೇಶಕ್ಕೆ ನೂರಾರು ಮಂದಿ ಕಾರ್ಮಿಕರು ವಿವಿಧ ಪಾಳಿಗಳಲ್ಲಿ ರಾತ್ರಿಯಿಡೀ ಓಡಾಟ ಮಾಡುತ್ತಾರೆ. ಚಿರತೆ ಕಂಡಿರುವುದರಿಂದ ಬಡಾವಣೆ ಮತ್ತು ಸುತ್ತಮುತ್ತಲ ಗ್ರಾಮಗಳ ಜನರು ಭಯಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಯ ಸಿಬ್ಬಂದಿ ಕ್ರಮ ಕೈಗೊಂಡು ಚಿರತೆಯನ್ನು ಪತ್ತೆ ಮಾಡಿ ಸೆರೆ ಹಿಡಿಯಬೇಕು ಎಂದು ಸ್ಥಳೀಯ ಅಣ್ಣಯ್ಯಪ್ಪ ಒತ್ತಾಯಿಸಿದರು.</p>.<p>ಅರಣ್ಯ ಇಲಾಖೆಯಿಂದ ಗಸ್ತು ಹೆಚ್ಚಿಸಲಾಗುವುದು. ಜತೆಗೆ ಸಾರ್ಜನಿಕರೂ ಎಚ್ಚರಿಕೆ ವಹಿಸಬೇಕು. ರಾತ್ರಿ ಮತ್ತು ಮುಂಜನಾನೆಯ ಸಂದರ್ಭದ ಓಡಾಟ ನಿಲ್ಲಿಸಬೇಕು ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ಸಲಹೆ ನೀಡಿದರು.</p>.<p>ಚಿರತೆಯ ಚಲನವಲನ ಮತ್ತು ಹೆಜ್ಜೆ ಗುರುತು ಗುರುತಿಸಲಾಗಿದೆ. ಚಿರತೆ ಓಡಾಡಿರುವ ಜಾಗವನ್ನು ಪರಿಶೀಲಿಸಲಾಗಿದ್ದು, ಭಾನುವಾರ ರಾತ್ರಿ ಚಿರತೆ ಓಡಾಟ ಕಂಡು ಬಂದಲ್ಲಿ ಬೋನಿಟ್ಟು ಸೆರೆ ಹಿಡಿಯಲಾಗುವುದು ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>