<p><strong>ಆನೇಕಲ್:</strong> ತಾಲ್ಲೂಕಿನ ನೆರಿಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮನಾಯಕನಹಳ್ಳಿ ಕೆರೆಯ ಬಳಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು ಜನರಲ್ಲಿ ಆತಂಕ ಉಂಟು ಮಾಡಿದೆ.</p>.<p>ಎರಡು ದಿನಗಳ ಹಿಂದೆ ನೆರಿಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ರಗುಪ್ಪೆ ಬಳಿ ಹೆಜ್ಜೆ ಗುರುತು ಪತ್ತೆಯಾಗಿತ್ತು. ಶುಕ್ರವಾರ ರಾಮನಾಯಕನಹಳ್ಳಿ ಬಳಿ ಚಿರತೆಯ ಹೆಜ್ಜೆಗುರುತುಗಳು ಕಂಡು ಬಂದಿದ್ದು ಚಿರತೆಯು ಈ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಸಾಧ್ಯತೆಯಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.</p>.<p>ರಾತ್ರಿ ಸಂಚರಿಸುವ ಚಿರತೆಯು ಜಿಂಕೆ ಮರಿಗಳ ಬೇಟೆಗಾಗಿ ಬಂದಿರುವ ಸಾಧ್ಯತೆಗಳಿವೆ. ಆದರೆ ಪ್ರತ್ಯಕ್ಷ ದರ್ಶಿಗಳು ಯಾರೂ ಕಂಡಿಲ್ಲ. ಈ ಭಾಗದ ಗ್ರಾಮಗಳಲ್ಲಿ ಕುರಿ ಮೇಕೆಯನ್ನು ತಿಂದ ಬಗ್ಗೆಯೂ ಮಾಹಿತಿಗಳಿಲ್ಲ. ಹೆಜ್ಜೆ ಗುರುತುಗಳನ್ನು ಪರಿಶೀಲಿಸಿದರೆ ಚಿರತೆಯ ಹೆಜ್ಜೆ ಗುರುತು ಸ್ಪಷ್ಟವಾಗಿ ಕಂಡು ಬಂದಿವೆ ಎಂದು ವಲಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಪ್ರಕಟಣೆ ಹೊರಡಿಸಿ ರಾತ್ರಿ ವೇಳೆಯಲ್ಲಿ ಮನೆಯಿಂದ ಹೊರಬರದಂತೆ ಜನರಿಗೆ ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ತಾಲ್ಲೂಕಿನ ನೆರಿಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮನಾಯಕನಹಳ್ಳಿ ಕೆರೆಯ ಬಳಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು ಜನರಲ್ಲಿ ಆತಂಕ ಉಂಟು ಮಾಡಿದೆ.</p>.<p>ಎರಡು ದಿನಗಳ ಹಿಂದೆ ನೆರಿಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ರಗುಪ್ಪೆ ಬಳಿ ಹೆಜ್ಜೆ ಗುರುತು ಪತ್ತೆಯಾಗಿತ್ತು. ಶುಕ್ರವಾರ ರಾಮನಾಯಕನಹಳ್ಳಿ ಬಳಿ ಚಿರತೆಯ ಹೆಜ್ಜೆಗುರುತುಗಳು ಕಂಡು ಬಂದಿದ್ದು ಚಿರತೆಯು ಈ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಸಾಧ್ಯತೆಯಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.</p>.<p>ರಾತ್ರಿ ಸಂಚರಿಸುವ ಚಿರತೆಯು ಜಿಂಕೆ ಮರಿಗಳ ಬೇಟೆಗಾಗಿ ಬಂದಿರುವ ಸಾಧ್ಯತೆಗಳಿವೆ. ಆದರೆ ಪ್ರತ್ಯಕ್ಷ ದರ್ಶಿಗಳು ಯಾರೂ ಕಂಡಿಲ್ಲ. ಈ ಭಾಗದ ಗ್ರಾಮಗಳಲ್ಲಿ ಕುರಿ ಮೇಕೆಯನ್ನು ತಿಂದ ಬಗ್ಗೆಯೂ ಮಾಹಿತಿಗಳಿಲ್ಲ. ಹೆಜ್ಜೆ ಗುರುತುಗಳನ್ನು ಪರಿಶೀಲಿಸಿದರೆ ಚಿರತೆಯ ಹೆಜ್ಜೆ ಗುರುತು ಸ್ಪಷ್ಟವಾಗಿ ಕಂಡು ಬಂದಿವೆ ಎಂದು ವಲಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಪ್ರಕಟಣೆ ಹೊರಡಿಸಿ ರಾತ್ರಿ ವೇಳೆಯಲ್ಲಿ ಮನೆಯಿಂದ ಹೊರಬರದಂತೆ ಜನರಿಗೆ ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>