ಬೆಂಗಳೂರು ಸುತ್ತಮುತ್ತ ಚಿರತೆ ಉಪಟಳದ ಆತಂಕದ ನಡುವೆಯೇ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಾಗುವ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು ಕ್ಷೇತ್ರಕ್ಕೆ ಹೋಗುವ ಭಕ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಲಘುಮೇನಹಳ್ಳಿ ಕ್ರಾಸ್ ಸಮೀಪ ಚಿರತೆಯು ತನ್ನ ಎರಡು ಮರಿಗಳೊಂದಿಗೆ ರಸ್ತೆ ದಾಟಿದ್ದನ್ನು ಕಂಡಿರುವುದಾಗಿ ಇದೇ ರಸ್ತೆಯಲ್ಲಿ ಸಾಗಿದ್ದ ಕೆಲವು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಒಂದು ವಾರದ ಹಿಂದೆಯಷ್ಟೇ ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ಚನ್ನಾಪುರ ಗ್ರಾಮದ ಅಂಚಿನಲ್ಲಿ ಕುರಿ ದೊಡ್ಡಿಗೆ ನುಗ್ಗಿದ್ದ ಚಿರತೆಯು ಕುರಿಯನ್ನು ತಿಂದು ಹಾಕಿತ್ತು.