<p><strong>ದಾಬಸ್ ಪೇಟೆ:</strong> ನೆಲಮಂಗಲ ತಾಲ್ಲೂಕು, ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ ಅವರನ್ನು ಅಮಾನತು ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎಸ್.ಅನುರಾಧ ಅವರು ಆದೇಶ ಹೊರಡಿಸಿದ್ದಾರೆ.</p><p>ಇದೇ ಪಂಚಾಯಿತಿಯ ಗ್ರಂಥಾಲಯದ ಗ್ರಂಥಪಾಲಕರಾಗಿ (ಮೇಲ್ವಿಚಾರಕ) 25 ವರ್ಷದಿಂದ ಕೆಲಸ ಮಾಡುತ್ತಿದ್ದ</p><p>ಗೋವೆನಹಳ್ಳಿ ಗ್ರಾಮದ ರಾಮಚಂದ್ರಯ್ಯ ಅವರು ಅ.27 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.</p><p>ರಾಮಚಂದ್ರಯ್ಯ ಅವರ ಸಾವಿಗೆ ಪಿಡಿಒ ಗೀತಾಮಣಿ ಕಾರಣ. ಸುಮಾರು ಮೂರು ತಿಂಗಳಿಂದ ವೇತನ ಪಾವತಿಸದೇ ಹಾಗೂ ಅವರು ಹಾಜರಾತಿ ತೋರಿಸಲು ಬಯೋ ಮೆಟ್ರಿಕ್ ಕೊಡದೆ ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಅವರ ಸಹೋದರನ ಮಗ ಕಾಂತರಾಜು ಠಾಣೆಗೆ ದೂರು ನೀಡಿದ್ದರು.</p><p>ಈ ಸಂಬಂಧ ಪಿಡಿಒ ಗೀತಾಮಣಿ(ಆರೋಪಿ–1) ವಿರುದ್ಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.</p><p>ಪಂಚಾಯಿತಿ ಸಿಬ್ಬಂದಿ ಮೃತಪಟ್ಟು 24 ಗಂಟೆ ಕಳೆದರೂ ಪಿಡಿಒ ಸಂಪರ್ಕಕ್ಕೆ ಸಿಕ್ಕಿಲ್ಲ. ಈ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ತಿಳಿಸದೆ ತೆರಳಿ ಲೋಪ ಎಸಗಿದ್ಧಾರೆ. ಅಲ್ಲದೇ ರಾಮಚಂದ್ರಯ್ಯ ಅವರಿಗೆ ವೇತನ ಪಾವತಿಸದೇ ಇರುವುದು ಕಂಡುಬಂದಿದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ನೆಲಮಂಗಲ ತಾಲ್ಲೂಕು, ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ ಅವರನ್ನು ಅಮಾನತು ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎಸ್.ಅನುರಾಧ ಅವರು ಆದೇಶ ಹೊರಡಿಸಿದ್ದಾರೆ.</p><p>ಇದೇ ಪಂಚಾಯಿತಿಯ ಗ್ರಂಥಾಲಯದ ಗ್ರಂಥಪಾಲಕರಾಗಿ (ಮೇಲ್ವಿಚಾರಕ) 25 ವರ್ಷದಿಂದ ಕೆಲಸ ಮಾಡುತ್ತಿದ್ದ</p><p>ಗೋವೆನಹಳ್ಳಿ ಗ್ರಾಮದ ರಾಮಚಂದ್ರಯ್ಯ ಅವರು ಅ.27 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.</p><p>ರಾಮಚಂದ್ರಯ್ಯ ಅವರ ಸಾವಿಗೆ ಪಿಡಿಒ ಗೀತಾಮಣಿ ಕಾರಣ. ಸುಮಾರು ಮೂರು ತಿಂಗಳಿಂದ ವೇತನ ಪಾವತಿಸದೇ ಹಾಗೂ ಅವರು ಹಾಜರಾತಿ ತೋರಿಸಲು ಬಯೋ ಮೆಟ್ರಿಕ್ ಕೊಡದೆ ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಅವರ ಸಹೋದರನ ಮಗ ಕಾಂತರಾಜು ಠಾಣೆಗೆ ದೂರು ನೀಡಿದ್ದರು.</p><p>ಈ ಸಂಬಂಧ ಪಿಡಿಒ ಗೀತಾಮಣಿ(ಆರೋಪಿ–1) ವಿರುದ್ಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.</p><p>ಪಂಚಾಯಿತಿ ಸಿಬ್ಬಂದಿ ಮೃತಪಟ್ಟು 24 ಗಂಟೆ ಕಳೆದರೂ ಪಿಡಿಒ ಸಂಪರ್ಕಕ್ಕೆ ಸಿಕ್ಕಿಲ್ಲ. ಈ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ತಿಳಿಸದೆ ತೆರಳಿ ಲೋಪ ಎಸಗಿದ್ಧಾರೆ. ಅಲ್ಲದೇ ರಾಮಚಂದ್ರಯ್ಯ ಅವರಿಗೆ ವೇತನ ಪಾವತಿಸದೇ ಇರುವುದು ಕಂಡುಬಂದಿದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>