ರೈತ ಹನುಮಂತರಾಯಪ್ಪ ಮಾತನಾಡಿ ‘ಸಾಕಷ್ಟು ಮಂದಿ ನಿರುದ್ಯೋಗಿ ಯುವಕರು ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಅಲ್ಪಸ್ವಲ್ಪ ನೀರಿರುವವರು ರೇಷ್ಮೆ ಉದ್ಯಮದಲ್ಲೇ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ನೀರಿನ ಕೊರತೆಯಿಂದಾಗಿ ಹಿಪ್ಪು ನೇರಳೆ ಗಿಡಗಳು ಒಣಗುತ್ತಿವೆ. ನೀರಾಯಿಸಲು ಅಳವಡಿಸಿದ್ದ ಪೈಪುಗಳು ಒಣಗಿ ತುಂಡಾಗುತ್ತಿವೆ. ಹಾಕಿದ ಬಂಡವಾಳವೂ ಕೈಗೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಕುಟುಂಬ ನಿರ್ವಹಣೆ ಚಿಂತೆ ಜತೆಗೆ ನಿರುದ್ಯೋಗದ ಸಮಸ್ಯೆ ಕಾಡುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.