ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಲ ಶಂಕಿಸಿ ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ

Published 5 ಆಗಸ್ಟ್ 2023, 15:28 IST
Last Updated 5 ಆಗಸ್ಟ್ 2023, 15:28 IST
ಅಕ್ಷರ ಗಾತ್ರ

ಆನೇಕಲ್ : ಶೀಲ ಶಂಕಿಸಿ ಪತ್ನಿಯ ಕೊಲೆ ಮಾಡಿದ್ದ ಅಪರಾಧಿಗೆ ಆನೇಕಲ್‌ನ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕರಬಾರಿ ರವೀಂದ್ರ ಅವರು ಜೀವಾವಧಿ ಶಿಕ್ಷೆ ಮತ್ತು ₹ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ ಎಂದು ಸರ್ಕಾರಿ ಅಭಿಯೋಜಕ ಜಿ.ತಾರಾನಾಥ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನೇಕಲ್‌ ತಾಲ್ಲೂಕಿನ ಕಾಚನಾಯಕನಹಳ್ಳಿ ದಿಣ್ಣೆ ನಿವಾಸಿ ವೆಂಕಟೇಶ್‌ ಶಿಕ್ಷೆಗೆ ಒಳಗಾದ ಅಪರಾಧಿ. 

ವೆಂಕಟೇಶ್‌ ತನ್ನ ಪತ್ನಿ ಮಾಲಾರಾಣಿ ಅವರ ಶೀಲ ಶಂಕಿಸಿ 2021ರ ನವೆಂಬರ್‌ 28ರಂದು ಕೊಲೆ ಮಾಡಿದ್ದ. ಸೂರ್ಯಸಿಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಆಗಸ್ಟ್‌ 3ರಂದು ಆರೋಪಿ ವೆಂಕಟೇಶ್‌ಗೆ ಜೀವಾವಧಿ ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಜಿ.ತಾರಾನಾಥ ಅವರು ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT