ಮೃತರನ್ನು ಕಡೂರಿನ ಮಹಮದ್ ಜುನೇದ್ (35) ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದಾಗಿ ಬೊಮ್ಮಂಡಹಳ್ಳಿ ಸಮೀಪ ಸಾಯಿ ಪ್ರಶಾಂತ್ ಲೇಔಟ್ ಬಳಿ ವಿದ್ಯುತ್ ಕಂಬದಲ್ಲಿ ತಂತಿ ತುಂಡಾಗಿ ಕೆಳಗೆ ಬಿದ್ದಿತ್ತು. ಇದನ್ನು ಸರಿಪಡಿಸಲು ಮಹಮದ್ ಜುನೇದ್ ವಿದ್ಯುತ್ ಕಂಬವನ್ನು ಏರಿದ್ದರು. ಅಧಿಕಾರಿಗಳು ಲೈನ್ ಚಾರ್ಜ್ ಮಾಡಿದ್ದರಿಂದ ವಿದ್ಯುತ್ ಪ್ರವಹಿಸಿ ಕಂಬದ ಮೇಲೆ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದ್ದಾರೆ ಎಂದು ಹೇಳಲಾಗಿದೆ.