ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಕಂಬದಲ್ಲಿ ಸುಟ್ಟು ಕರಕಲಾದ ಲೈನ್‌ಮ್ಯಾನ್

Last Updated 11 ಜುಲೈ 2018, 16:09 IST
ಅಕ್ಷರ ಗಾತ್ರ

ಆನೇಕಲ್: ಮಳೆ ಗಾಳಿಯಿಂದ ಹಾನಿಗೊಳಗಾಗಿದ್ದ ವಿದ್ಯುತ್ ಲೈನ್‌ ಅನ್ನು ತಾಲ್ಲೂಕಿನ ಜಿಗಣಿ ಸಮೀಪದ ಬೊಮ್ಮಂಡಹಳ್ಳಿಯಲ್ಲಿ ದುರಸ್ತಿ ಪಡಿಸುವಾಗ ಆಕಸ್ಮಿಕ ವಿದ್ಯುತ್ ಸ್ಪರ್ಶವಾಗಿ ಲೈನ್‌ ಮ್ಯಾನ್‌ ವಿದ್ಯುತ್ ಕಂಬದಲ್ಲಿಯೇ ಸುಟ್ಟು ಕರಕಲಾಗಿ ಮೃತ ಪಟ್ಟಿದ್ದಾರೆ.

ಮೃತರನ್ನು ಕಡೂರಿನ ಮಹಮದ್ ಜುನೇದ್ (35) ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದಾಗಿ ಬೊಮ್ಮಂಡಹಳ್ಳಿ ಸಮೀಪ ಸಾಯಿ ಪ್ರಶಾಂತ್ ಲೇಔಟ್ ಬಳಿ ವಿದ್ಯುತ್ ಕಂಬದಲ್ಲಿ ತಂತಿ ತುಂಡಾಗಿ ಕೆಳಗೆ ಬಿದ್ದಿತ್ತು. ಇದನ್ನು ಸರಿಪಡಿಸಲು ಮಹಮದ್ ಜುನೇದ್ ವಿದ್ಯುತ್ ಕಂಬವನ್ನು ಏರಿದ್ದರು. ಅಧಿಕಾರಿಗಳು ಲೈನ್ ಚಾರ್ಜ್ ಮಾಡಿದ್ದರಿಂದ ವಿದ್ಯುತ್ ಪ್ರವಹಿಸಿ ಕಂಬದ ಮೇಲೆ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದ್ದಾರೆ ಎಂದು ಹೇಳಲಾಗಿದೆ.

ಜಿಗಣಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT