ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನೇರುಘಟ್ಟ ಉದ್ಯಾನದ ಸಿಂಹ ‘ರಾಮ’ ಸಾವು

Published 16 ನವೆಂಬರ್ 2023, 20:45 IST
Last Updated 16 ನವೆಂಬರ್ 2023, 20:45 IST
ಅಕ್ಷರ ಗಾತ್ರ

ಆನೇಕಲ್ : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಿಂಹ ‘ರಾಮ’ (13) ಗುರುವಾರ ಮೃತಪಟ್ಟಿದೆ. ‘ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿರುವ ಸಾಧ್ಯತೆ ಇದೆ. ಅಂಗಾಂಗಗಳ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಪಶು ವೈದ್ಯಕೀಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್‌ ತಿಳಿಸಿದರು.

‘ಬುಧವಾರ ವಾಂತಿ ಲಕ್ಷಣ ಕಂಡು ಬಂದಿತು. ಕೂಡಲೇ ಚಿಕಿತ್ಸೆ ನೀಡಿದರೂ ನಿಶ್ಯಕ್ತಿಯಿಂದ ಬಳಲುತ್ತಿತ್ತು. ಪಶುವೈದ್ಯರ ತಂಡ ಚಿಕಿತ್ಸೆ ನೀಡಿ ನಿಗಾ ವಹಿಸಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ’ ಎಂದು ಮಾಹಿತಿ ನೀಡಿದರು.

2010, ಫೆ.4ರಂದು ಜೈವಿಕ ಉದ್ಯಾನದ ಸಿಂಹ ಗಣೇಶ ಮತ್ತು ಸಿಂಹಿಣಿ ಅನುಗೆ ರಾಮ ಜನಿಸಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT