ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಎನ್.ನಾಗರಾಜ ಮಾತನಾಡಿ, ‘ರಾಷ್ಟ್ರ, ರಾಜ್ಯಮಟ್ಟದಿಂದ ಹಿಡಿದು ಗ್ರಾಮ ಪಂಚಾಯಿತಿ ಮಟ್ಟದವರೆಗೆ ಅನಕ್ಷರಸ್ಥರನ್ನು, ಅಕ್ಷರಸ್ಥರನ್ನಾಗಿ ಪರಿವರ್ತಿಸಬೇಕು. ಗ್ರಾಮೀಣ ಮಟ್ಟದಲ್ಲಿನ ಅಲ್ಪಸಂಖ್ಯಾತರ, ಪರಿಶಿಷ್ಟ ವರ್ಗಗಳ ಮಹಿಳೆಯರ ಮತ್ತು ಪುರುಷರ ಶೈಕ್ಷಣಿಕ ಮಟ್ಟ ಸುಧಾರಣೆಗಾಗಿ ಸಾಕ್ಷರತಾ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದು ಹೇಳಿದರು.