ಸ್ಥಳೀಯ ನಿವಾಸಿ ನಾರಾಯಣಸ್ವಾಮಿ ಮಾತನಾಡಿ, 2013ರಲ್ಲಿ ಪುರಸಭೆಗೆ ನಡೆದಿದ್ದ ಚುನಾವಣೆಯಲ್ಲಿ ಇಲ್ಲಿನ 23 ವಾರ್ಡ್ಗಳ ಪೈಕಿ ಐದು ವಾರ್ಡ್ಗಳಲ್ಲಿ ಪಕ್ಷೇತರರು, ಎರಡು ವಾರ್ಡ್ರ್ಗಳಲ್ಲಿ ಜೆಡಿಎಸ್, ಹದಿನೂರು ವಾರ್ಡ್ಗಳಲ್ಲಿ ಕಾಂಗ್ರೆಸ್ ಸದಸ್ಯರು ಆಯ್ಕೆಯಾಗಿದ್ದರೂ ಅಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿ ಪ್ರಕಟಣೆ ವಿಳಂಬದಿಂದ ಒಂದು ವರ್ಷದ ಅವಧಿಗೆ ಅಧ್ಯಕ್ಷರಿಲ್ಲದೆ ಆಡಳಿತಾಧಿಕಾರಿ ಉಸ್ತುವಾರಿ ಹೊತ್ತಿದ್ದರು. ಜನಪ್ರತಿನಿಧಿಗಳಿಗೆ ಒಂದು ವರ್ಷ ಹೆಚ್ಚಿನ ಕಾಲಾವಕಾಶ ಸಿಕ್ಕಿದರೂ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ನ್ಯಾಯಾಲಯದ ಮೆಟ್ಟಿಲು ಹತ್ತಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು.