ಪುರಸಭೆ ಮುಖ್ಯಾಧಿಕಾರಿ ಎ.ಬಿ.ಪ್ರದೀಪ್ ಕುಮಾರ್ ಮಾತನಾಡಿ, ಸರ್ಕಾರದ ನಿರ್ದೇಶನ ಪಾಲನೆ ಮಾಡುವುದು ನಮ್ಮ ಕರ್ತವ್ಯ. ಆದರೆ, ಕೋವಿಡ್ ಬಗ್ಗೆ ಜಾಗ್ರತೆ ಅಗತ್ಯ. ಕೇವಲ ಸರ್ಕಾರದಿಂದ ಅದನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಸಾರ್ವಜನಿಕರು ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರದಿಂದ ನಿರ್ದೇಶನ ಬಂದರೆ ಅವಕಾಶ ನೀಡಲಾಗುತ್ತದೆ ಎಂದರು.