<p><strong>ದೇವನಹಳ್ಳಿ:</strong>ತಾಲ್ಲೂಕಿನಲ್ಲಿ ಎರಡನೇ ಹಂತದ ಲಾಕ್ಡೌನ್ ಪೊಲೀಸರ ಬಿಗಿ ಬಂದೋಬಸ್ತ್ ನಡುವೆ ಬಹುತೇಕ ಯಶಸ್ಸಿಯಾಗಿ ಜಾರಿಯಾಯಿತು. ಮೂರು ದಿನಗಳ ಮೊದಲೇ ಘೋಷಿಸಿದ್ದರಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿತ್ತು.</p>.<p>ಬೆಳಿಗ್ಗೆ 5ರಿಂದ ಮಧ್ಯಾಹ್ನ 12ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಮಾರಾಟಗಾರರು ಮತ್ತು ಗ್ರಾಹಕರು ಕಟ್ಟುನಿಟ್ಟಿನ ಆದೇಶವನ್ನು ಉಲ್ಲಂಘಿಸಿದರು. ಅಂತರ ಕಾಯ್ದುಕೊಳ್ಳುವ ನಿಯಮವನ್ನು ಪಾಲಿಸಲಿಲ್ಲ.</p>.<p>ಕೆಲವರು ಮಾಸ್ಕ್ ಧರಿಸಿರಲಿಲ್ಲ. ಪೊಲೀಸರ ಗಸ್ತು ವಾಹನದ ಶಬ್ದ ಕೇಳಿದ ತಕ್ಷಣ ಅಂತರ ಕಾಯ್ದುಕೊಳ್ಳಲು ಗ್ರಾಹಕರು ಮುಂದಾದರು. ಕೆಲವು ಗ್ರಾಹಕರ ಬೇಜವಾಬ್ದಾರಿಯನ್ನು ಮಾರಾಟಗಾರರು ಪ್ರಶ್ನಿಸಲಿಲ್ಲ.</p>.<p>ನಗರದಿಂದ ಹೊರಭಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರ ನಿಷೇಧಿಸಲಾಗಿತ್ತು. ಸಂಚಾರಕ್ಕೆ ಇಳಿದ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಿದರು. ಅಗತ್ಯ ಇಲ್ಲದೇ ಸಂಚಾರ ನಡೆಸಿದ ಕೆಲ ದ್ವಿಚಕ್ರ ವಾಹನ ಸವಾರರಿಗೆ ಲಾಠಿ ರುಚಿ ತೋರಿಸಿದರು.</p>.<p>ದೈನಂದಿನ ಪ್ರಯಾಣದ ಯಾವುದೇ ಬಸ್, ಆಟೊ ರಸ್ತೆಗಿಳಿಯಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong>ತಾಲ್ಲೂಕಿನಲ್ಲಿ ಎರಡನೇ ಹಂತದ ಲಾಕ್ಡೌನ್ ಪೊಲೀಸರ ಬಿಗಿ ಬಂದೋಬಸ್ತ್ ನಡುವೆ ಬಹುತೇಕ ಯಶಸ್ಸಿಯಾಗಿ ಜಾರಿಯಾಯಿತು. ಮೂರು ದಿನಗಳ ಮೊದಲೇ ಘೋಷಿಸಿದ್ದರಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿತ್ತು.</p>.<p>ಬೆಳಿಗ್ಗೆ 5ರಿಂದ ಮಧ್ಯಾಹ್ನ 12ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಮಾರಾಟಗಾರರು ಮತ್ತು ಗ್ರಾಹಕರು ಕಟ್ಟುನಿಟ್ಟಿನ ಆದೇಶವನ್ನು ಉಲ್ಲಂಘಿಸಿದರು. ಅಂತರ ಕಾಯ್ದುಕೊಳ್ಳುವ ನಿಯಮವನ್ನು ಪಾಲಿಸಲಿಲ್ಲ.</p>.<p>ಕೆಲವರು ಮಾಸ್ಕ್ ಧರಿಸಿರಲಿಲ್ಲ. ಪೊಲೀಸರ ಗಸ್ತು ವಾಹನದ ಶಬ್ದ ಕೇಳಿದ ತಕ್ಷಣ ಅಂತರ ಕಾಯ್ದುಕೊಳ್ಳಲು ಗ್ರಾಹಕರು ಮುಂದಾದರು. ಕೆಲವು ಗ್ರಾಹಕರ ಬೇಜವಾಬ್ದಾರಿಯನ್ನು ಮಾರಾಟಗಾರರು ಪ್ರಶ್ನಿಸಲಿಲ್ಲ.</p>.<p>ನಗರದಿಂದ ಹೊರಭಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರ ನಿಷೇಧಿಸಲಾಗಿತ್ತು. ಸಂಚಾರಕ್ಕೆ ಇಳಿದ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಿದರು. ಅಗತ್ಯ ಇಲ್ಲದೇ ಸಂಚಾರ ನಡೆಸಿದ ಕೆಲ ದ್ವಿಚಕ್ರ ವಾಹನ ಸವಾರರಿಗೆ ಲಾಠಿ ರುಚಿ ತೋರಿಸಿದರು.</p>.<p>ದೈನಂದಿನ ಪ್ರಯಾಣದ ಯಾವುದೇ ಬಸ್, ಆಟೊ ರಸ್ತೆಗಿಳಿಯಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>