ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್ ಮಾತನಾಡಿ, ನಗರ ಪ್ರದೇಶದಲ್ಲಿ ಲಾಕ್ ಡೌನ್ ಯಶಸ್ವಿಯಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿನ ಸಾರ್ವಜನಿಕರು ನಿರ್ಭಯವಾಗಿ ಸಂಚರಿಸುತ್ತಿರುವುದು ದಿಗಿಲು ಹುಟ್ಟಿಸಿದೆ. ಕೊರೊನಾ ಗ್ರಾಮೀಣ ಭಾಗದಲ್ಲಿ ಉಲ್ಬಣಿಸಿದರೆ ಪರಿಸ್ಥಿತಿ ಯಾವ ಮಟ್ಟಕ್ಕೆ ಹೋಗಲಿದೆ ಎಂಬುದನ್ನು ಸ್ಥಳೀಯರು ಅರ್ಥ ಮಾಡಿಕೊಂಡು ನಿಗದಿಪಡಿಸಿರುವ ಲಾಕ್ ಡೌನ್ ಅವಧಿಯವರೆಗೆ ಮನೆಯಿಂದ ಹೊರ ಬಾರದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.